Wednesday, June 24, 2009

ನುಡಿ ಮುತ್ತುಗಳು - ೨೭

ನಾಚಿಕೆ ಅನ್ನುವುದನ್ನು ಬಿಟ್ಟಾಗ ಮಾನವ ಮೃಗನಾಗುತ್ತಾನೆ.
-ಯಾರೋ

ನಿಮ್ಮ ನಿನ್ನೆಯ ದಿನ ಇಂದಿನ ದಿನವನ್ನು ನುಂಗದಂತೆ ನೋಡಿಕೊಳ್ಳಿ.
-ಅನಾಮಿಕ

ನಗಲು ಬರುವವನು ಮಾತ್ರ ಇತರರನ್ನೂ ನಗಿಸಬಲ್ಲ.
-ವಿಟ್ ಮನ್

ನಾವು ನಮ್ಮನ್ನೇ ಅಲಕ್ಷಿಸದಿರುವುದು ನಮ್ಮ ಮೊದಲ ಕರ್ತವ್ಯ.
-ವಿವೇಕಾನಂದ

ನಿರಾಸೆ ಮರಣದ ಮತ್ತೊಂದು ಹೆಸರು.
-ಟಾಲ್ ಸ್ಟಾಯ್

ನಕ್ಕು ನಗಿಸುವಾ ನಗುಲೇಸು.
-ಸರ್ವಜ್ಞ

"ನಡೆದುಬಂದ ದಾರಿ ಕಡೆಗೆ ಹೊರಳಿಸಬೇಡ ಕಣ್ಣನು"
-ಅಡಿಗರು

ನೋವೆಲ್ಲಾ ಜೀವಕ್ಕೆ ಪುಟವಿಡುವ ಪಾಕ.
-ಕನ್ ಫ್ಯೂಷಿಯಸ್

ನಡೆ ಮುಂದೆ ನಡೆ ಮುಂದೆ ನುಗ್ಗಿ ನಡೆ ಮುಂದೆ .
-ಅಡಿಗರು


ನುಡಿ ಮುತ್ತುಗಳು - ೨೬

ಜಗತ್ತಿನ ಅತಿದೊಡ್ಡ ಪ್ರಾರ್ಥನೆಯೆಂದರೆ ತಾಳ್ಮೆ.
-ಗೌತಮ ಬುದ್ಧ

ಜಗತ್ತಿನಲ್ಲಿ ರೆಕ್ಕೆಗಳುಳ್ಳ ಎರಡನೆಯ ಸುಂದರ ವಸ್ತುವೆಂದರೆ ಪತಂಗ; ಮೊದಲನೆಯದು ಹಣ.
-ಅಜ್ಞಾನಿ

ತಾಳ್ಮೆಯಿಂದ ಕಾಯುವುದೇ ಯಶಸ್ಸಿನ ಗುಟ್ಟು.
-ವಿವೇಕವಾಣಿ

ತಮ್ಮನ್ನು ಸರಿಪಡಿಸಿಕೊಂಡವರು ಪ್ರಪಂಚವನ್ನು ಸರಿಪಡಿಸಿದವರಾಗುತ್ತಾರೆ.
-ಸ್ವಾಮಿ ವಿವೇಕಾನಂದ

ತನಗೆ ತಾನೇ ಕಟ್ಟುಪಾಡನ್ನು ವಿಧಿಸಿಕೊಳ್ಳುವವನೇ ಸ್ವತಂತ್ರನಾದ ವ್ಯಕ್ತಿ.
-ಗಾಂಧೀಜಿ

ತಾಯಿ ಇಲ್ಲದ ತವರಿಗೆ ಮಗಳು ಬಂದರೆ ಉರಿಬೇಸಗೆಯಲ್ಲಿ ಮರಳು ಗಾಡಿಗೆ ಬಂದಂತೆ.
-ಅನಕೃ

ತಾಯಿ ಮತ್ತು ತಾಯ್ನಾಡು ಸ್ವರ್ಗಕ್ಕಿಂತ ಮಿಗಿಲು.
-ಲೋಕೋಕ್ತಿ

ದುಡಿಮೆ ಮುನ್ನಡೆಗೆ ಕೀಲಿ.
-ನಾಣ್ನುಡಿ

ದೇವರು ಒಬ್ಬನೇ. ಅವನನ್ನು ಭಾವಿಸುವ ಮನಸ್ಸುಗಳು ಮಾತ್ರ ಅನೇಕ.
-ಉಪನಿಷತ್

ದುಡ್ಡು ಎಂದರೆ ದುಡಿದು ತರಬೇಕಾದ ವಸ್ತು.
-ನಾ.ಕಸ್ತೂರಿ




ನುಡಿ ಮುತ್ತುಗಳು - ೨೫

ಕಾಲ ಎನ್ನುವುದು ನಿಂತ ನೀರಲ್ಲ ಹರಿಯುತ್ತಿರುವ ಪ್ರವಾಹ.
-ಷೇಕ್ಸ್ ಪಿಯರ್

ಕಳೆದುಹೋದ ಸುಖವನ್ನು ನೆನಪಿಸಿಕೊಳ್ಳುವುದೇ ದುಃಖಗಳಲ್ಲಿ ದುಃಖ.
-ಷೇಕ್ಸ್ ಪಿಯರ್

ಕಣ್ಣುಗಳ ಬದಲಾಗಿ ಹೃದಯದಿಂದ ನೋಡುವುದೇ ತಾಳ್ಮೆ.
-ನೋಟ್ಸ್

ಕಾವ್ಯೋಪಾಸನೆಯು ಉತ್ತಮ ಆತ್ಮ ಸಂಸ್ಕಾರ.
-ಡಿವಿಜಿ

ಕೀರ್ತಿ ಬಂದಾಗ ನೆನಪಿನ ಶಕ್ತಿ ಅಳಿಯುತ್ತದೆ.
-ಹೆನ್ರಿವಾರ್ಡ್ ಬೇಚರ್

ಕ್ರೂರ ಹುಲಿಗಿಂತ ಕ್ರೂರವಾದುದೆಂದರೆ ಜನರನ್ನು ಹಿಂಸಿಸುವ ಸರಕಾರ.
-ಕನ್ ಫ್ಯೂಷಿಯಸ್

ಕೆಟ್ಟ ಮಾತಿನೊಡನೆ ಗೆಳೆತನವು ಕೊನೆಗೊಳ್ಳುತ್ತದೆ.
-ಪಂಚತಂತ್ರ

ಕಾಲವನ್ನು ನಾವು ಪಾಲಿಸಿದರೆ ಅದು ನಮಗೆ ವಿಧೇಯವಾಗಿರುತ್ತದೆ.
-ಸರ್ ಎಂ.ವಿ

ಕಟ್ಟುವೆವು ನಾವು ಹೊಸ ನಾಡೊಂದನು; ರಸದ ಬೀಡೊಂದನು.
-ಅಡಿಗರು

ಚೆನ್ನಾಗಿ ಮುಚ್ಚಿಟ್ಟ ಪುಸ್ತಕ ಕೇವಲ ಒಂದು ಕಾಗದದ ಕಂತೆ.
-ನಂಬಿಯಾರ್

ಕಾಮವಿದ್ದವನಿಗೆ ರಾಮನಿಲ್ಲ: ರಾಮನಿದ್ದವನಿಗೆ ಕಾಮವಿಲ್ಲ; ಕಾಮವನ್ನು ಗೆದ್ದವನು ರಾಮನನ್ನು ಗೆಲ್ಲಬಲ್ಲ.
-ಓಶೋ

ನುಡಿ ಮುತ್ತುಗಳು - ೨೪

ಅಹಿಂಸೆ ಇಲ್ಲದೆ ಸತ್ಯ ಸಾಕ್ಷಾತ್ಕಾರ ಸಾಧ್ಯವಿಲ್ಲ.
-ಗಾಂಧೀಜಿ

ಅನ್ನವನು ಇಕ್ಕುವ ಅನ್ಯಜಾತನೆ ಕುಲಜ
-ಸರ್ವಜ್ಞ

ಅರಮನೆಯನ್ನು ಏರಿದರೂ ಕಾಗೆ ಗರುಡ ಪಕ್ಷಿಯಾದೀತೇ?
-ಸುಭಾಷಿತ

ಆಡದೆ ಮಾಡುವವನು ರೂಢಿಯೊಳುತ್ತಮನು.
-ಸರ್ವಜ್ಞ

ಇರಬೇಕು ಇರಬೇಕು ಸಂಸಾರದಿ ಜನಕಾದಿ ರಾಜ ಋಷಿಗಳಂತೆ.
-ಪುರಂದರದಾಸರು

ಇಂದ್ರಿಯಗಳ ದಾಸನು ದುಃಖಗಳ ದಾಸನೂ ಆಗುತ್ತಾನೆ.
-ಐನ್ ಸ್ಟೀನ್

’ಆಕಳಿಕೆ" ಎಂದರೆ ಮೌನವಾಗಿ ಹಾಕುವ ಬೊಬ್ಬೆ.
-ಜೆ.ಬರ್ಲಿಂಗ್ಸ್

ಆಸೆಗೆ ದಾಸರಾದವರು ಇಡೀ ಜಗತ್ತಿಗೂ ದಾಸರೇ.
-ಸೂಕ್ತಿ

ಉತ್ಸಾಹವನ್ನು ಕಳೆದುಕೊಂಡ ಮನಸ್ಸು ತೂತುಬಿದ್ದ ಬಲೂನಿನಂತೆ.
-ಸೂಕ್ತಿ

ಕೊಂಬಿಲ್ಲದ ದನಗಳು ಗ್ರಾಮಗಳಲ್ಲಿ ಇರುತ್ತವೆ. ಮೆದುಳಿಲ್ಲದ ಜನಗಳು ಪಟ್ಟಣಗಳಲ್ಲಿರುತ್ತಾರೆ.
-ಗೆಲಿಲಿಯೊ

ಕಷ್ಟವೂ ಬಡತನವೂ, ಬೋಧಿಸುವಂತೆ ಬೇರೆ ಯಾವುದೂ ಬೋಧಿಸಲಾರದು.
-ಸ್ವಾಮಿ ವಿವೇಕಾನಂದ

Tuesday, June 23, 2009

ನುಡಿಮುತ್ತುಗಳು - ೨೩

ವಿನಾಶಕಾಲೇ ವಿಪರೀತ ಸಿಧ್ಧಿ!

ಕೈಲಾಸಂ

ಸರಳತೆಯು ನಿಸರ್ಗದ ಮೊದಲ ಹೆಜ್ಜೆ ಮತ್ತು ಕಲೆಯ ಕೊನೆಯ ಹೆಜ್ಜೆ.

ಫಿಲಿಪ್ ಜೇಮ್ಸ್ ಬೈಲಿ


ನಮ್ಮಲ್ಲಿಲ್ಲದ ಗುಣ ಬೇರೆಯವರಲ್ಲಿದ್ದರೆ ಅದನ್ನು ನಮ್ಮಲ್ಲಿ ತರುವ ಪ್ರಯತ್ನ ಮಾಡಬಾರದು. ಹಾಗೆ ಮಾಡಲು ಹೊರಟರೆ ನಾವು ಪರಮಾತ್ಮನ ಬಳಿ ಹೋಗುವ ಬದಲು ಮನುಷ್ಯನ ಬಳಿ ಸೇರುತ್ತೇವೆ.

ವಿನೋಬಾ ಭಾವೆ

ಆಡದೆಲೆ ಕೊಡುವವನು ರೂಢಿಯೊಳಗುತ್ತಮನು
ಆಡಿ ಕೊಡುವವ ಮಧ್ಯಮನು
ಅಧಮ ತಾನಾಡಿ ಕೊಡದವನು ಸರ್ವಜ್ಞ

ಸರ್ವಜ್ಞ

ನುಡಿಮುತ್ತುಗಳು - ೨೨

ಕೋಪವೆಂಬುದು ಮೂರ್ಖತನದಲ್ಲಿ ಆರಂಭಗೊಂಡು ಪಶ್ಚಾತ್ತಾಪದಲ್ಲಿ ಅಂತ್ಯಗೊಳ್ಳುತ್ತದೆ

ಪ್ರಚಲಿತ

ಕ್ರಾಂತಿಕಾರಿಯಾಗುವುದಕ್ಕಿಂದ ಮೊದಲು ನೀನು ಒಬ್ಬ ಮನುಷ್ಯನಾಗಬೇಕು, ದುರ್ಬಲರು ಯಾರೇ ಅಗಲಿ ಅವರಿಗಾಗಿ ಶ್ರಮಿಸಬೇಕು.

ಜೇನ್ ಫೊಂಡಾ

"ಎಂಥ ನಾಡಿದು ಯೆಂಥ ಕಾಡಾಯಿತೋ"

ರಂ. ಶ್ರೀ. ಮುಗಳಿ.

ಹುಲ್ಲಾಗು ಬೆಟ್ಟದಡಿ, ಮನೆಗೆ ಮಲ್ಲಿಗೆಯಾಗು
ಕಲ್ಲಾಗು ಕಷ್ಟಗಳ ವಿಧಿ ಮಳೆ ಸುರಿಯೆ ।।
ಬೆಲ್ಲ ಸಕ್ಕರೆಯಾಗು ದೀನ ದುರ್ಬಲರಿಂಗೆ
ಎಲ್ಲರೊಳಗೊಂದಾಗು -- ಮಂಕುತಿಮ್ಮ

ಡಿ.ವಿ.ಜಿ.

ನುಡಿಮುತ್ತುಗಳು - ೨೧

ದಿನದಿನವು ಹಳಸುವುವು, ದಿನದಿನವು ಕೊಳೆಯುವುವು
ಮನುಜಕುಲದೆಲ್ಲ ಕೃತಿವಿಜಯವಿಭವಗಳು
ಅನುದಿನವು ಮತ್ತವನು ತೊಳೆದು ಹೊಸತೆನಿಸುವುದೆ
ಜನುಮಸಫಲತೆ ನಿನಗೆ -- ಮಂಕುತಿಮ್ಮ
— ಡಿ. ವಿ. ಜಿ.

ನಿನ್ನ ದೊಡ್ಡ ನೆರಳನ್ನು ನೋಡಿ ಹೆದರುವ ಅಥವಾ ಭಯ ಪಡುವ ಕಾರಣವಿಲ್ಲ. ಅದು ನಿನ್ನ ಗುಲಾಮ. ನಿನ್ನ ಆಜ್ಞೆಯಂತೆ ನಡೆಯುತ್ತದೆ. ನೀನು ನಿಂತರೆ ಅದೂ ನಿಲ್ಲುವುದು, ನೀನು ಕುಳಿತರೆ ಅದೂ ಕುಳಿತುಕೊಳ್ಳುವುದು.
— ವಿನೋಬಾ ಭಾವೆ

ಅತಿಥಿಗೆ ಬಡಿಸದ ಆಹಾರವನ್ನು ತಾನು ಉಣ್ಣಬಾರದು. ಅತಿಥಿ ಸತ್ಕಾರವು ಕೀರ್ತಿಯನ್ನೂ, ಹಣವನ್ನೂ, ಆಯಸ್ಸನ್ನೂ, ಪರಮಸುಖವನ್ನೂ ಕೊಡುತ್ತದೆ.

— ಮನುಸ್ಮೃತಿ

ಜೀವನದಲ್ಲಿ ಸ್ನೇಹಕ್ಕಿಂತ ಮಿಗಿಲಾದ ಸಂಬಂಧ ಬೇರೆಯಿಲ್ಲ, ಕಷ್ಟ ಕಾಲದಲ್ಲಿ ಕೈ ಹಿಡಿದು ನಡೆಸುವುದೊಂದೇ ಅದೇ ಸ್ನೇಹ.

ಪ್ರೀತಿ ಮತ್ತು ಸ್ನೇಹ ಒಂದು ನಾಣ್ಯದ ಎರಡು ಮುಖಗಳು.


ನುಡಿಮುತ್ತುಗಳು - ೨೦

ನಮ್ಮಲ್ಲಿಲ್ಲದ ಗುಣ ಬೇರೆಯವರಲ್ಲಿದ್ದರೆ ಅದನ್ನು ನಮ್ಮಲ್ಲಿ ತರುವ ಪ್ರಯತ್ನ ಮಾಡಬಾರದು. ಹಾಗೆ ಮಾಡಲು ಹೊರಟರೆ ನಾವು ಪರಮಾತ್ಮನ ಬಳಿ ಹೋಗುವ ಬದಲು ಆ ಮನುಷ್ಯನ ಬಳಿ ಸೇರುತ್ತೇವೆ.
— ವಿನೋಬಾ ಭಾವೆ

ಹಂದಿ ಚಂದನದ ಸು
ಗಂಧವನು ಬಲ್ಲುದೆ?
ಒಂದನು ತಿಳಿಯಲರಿಯದ ಗುರುವಿಂಗೆ
ನಿಂದೆಯೇ ಬಹುದು ಸರ್ವಜ್ಞ

ಯಾರಾದರೂ ಸಮುದ್ರದಲ್ಲಿ ಇಳಿಯ ಬಯಸಿದರೆ 'ದೋಣಿ ತೆಗೆದುಕೊಂಡು ಹೋಗು' ಎನ್ನುವೆವು. ಇದೇ ಕರ್ಮ ಯೋಗ. ದಂಡೆಯ ಮೇಲೆ ನಿಂತು ನೋಡುವುದು ಸನ್ಯಾಸ. ಇವೆರಡರ ಆನಂದವೂ ಒಂದೇ. ಎರಡರಲ್ಲಿಯೂ ಮನುಷ್ಯ ಮುಳುಗುವುದಿಲ್ಲ. ಸಾಕ್ಷಿಯಂತೆ ಸಮುದ್ರವನ್ನು ನೋಡುತ್ತಾನೆ, ಇದರಲ್ಲೇ ಇರುವುದು ಆನಂದ.
— ವಿನೋಬಾ ಭಾವೆ

ಜಗತ್ತಿನಲ್ಲಿ ಗ್ರಹಿಸಲು ಅತ್ಯಂತ ಕಷ್ಟಕರವಾದ ವಿಷಯವೆಂದರೆ ಆದಾಯ ತೆರಿಗೆ!
- ಆಲ್ಬರ್ಟ್ ಐನ್‍ಸ್ಟೈನ್

ನುಡಿಮುತ್ತುಗಳು - ೧೯

ಕುಲಗೆಟ್ಟವರ ಚಿಂತೆ ಒಳಗಿರ್ಪರಂತಲ್ಲ
ಕುಲಗೆಟ್ಟು ಶಿವನ ಮರೆಹೊಕ್ಕು ಋಷಿಗಳು
ಕುಲವಾದರಯ್ಯ ಸರ್ವಜ್ಞ
— ಸರ್ವಜ್ಞ

ದುರ್ಬಲಮತಿಗಿಲ್ಲಾತ್ಮ ರಸೋದಯ
ದುರ್ಬಲ ಸಮಾಜಕದು ಮೃಗ್ಯ
ಹಬ್ಬುಗೆಯರಿವರ್ಗವ ಪಳಗಿಸಿ ಮನ
ದುಬ್ಬ ಪಡೆವವರಿಗಾ ಭಾಗ್ಯ.
— ಪು ತಿ ನ

ದುರ್ಬಲರಿಗೆ ಕ್ಷಮಿಸುವ ಹಕ್ಕಿಲ್ಲ, ಕ್ಷಮಿಸುವ ಶಕ್ತಿ ಮತ್ತು ಹಕ್ಕಿರುವುದು ಬಲಿಷ್ಠರಿಗೆ ಮಾತ್ರ.
— ಮಹಾತ್ಮ ಗಾಂಧಿ

ಮೊಗ ನಾಲ್ಕು ನರನಿಗಂತೆಯೆ ನಾರಿಗಂ ಬಗೆಯೆ ।
ಜಗಕೆ ಕಾಣಿಪುದೊಂದು, ಮನೆಯ ಜನಕೊಂದು ।।
ಸೊಗಸಿನೆಳಸಿಕೆಗೊಂದು, ತನ್ನಾತ್ಮಕ್ಕಿನ್ನೊಂದು ।
ಬಗೆಯೆಷ್ಟೊ ಮೊಗವಷ್ಟು -- ಮಂಕುತಿಮ್ಮ ।।
— ಡಿ.ವಿ.ಜಿ.

ಅನುಭವದ ಪಾಲೊಳು ವಿಚಾರ ಮಂಥನವಾಗೆ
ಜನಯಿಕುಂ ಜ್ಞಾನನವನೀತವೆ ಸುಖದಂ
ಗಿಣಿಯೋದು ಪುಸ್ತಕಜ್ಞಾನ; ನಿನ್ನನುಭವವೆ
ನಿನಗೆ ಧರುಮದ ದೀಪ - ಮಂಕುತಿಮ್ಮ
— ಡಿ ವಿ ಜಿ

ಮೊದಲು ಕನಸಿರಬೇಕು, ಅದೊಂದಿದ್ದರೆ ಎಲ್ಲವೂ ಸಾಧ್ಯವಾಗುವುದು.
— ಉಪನಿಷತ್ತುಗಳು

ನುಡಿಮುತ್ತುಗಳು - ೧೮

ಕಿವುಡುತನ ತಪ್ಪೀತೆ ರನ್ನಕುಂಡಲದಿಂದ? ತೊವಲು ಜಬ್ಬಲು ಬಿಳದೆ ಮೃಷ್ಟಾನ್ನದಿಂದ? ಭುವಿಯ ಪರಿಣಾಮದಲಿ ಸಿರಿಬಡತನಗಳೊಂದೆ ಜವರಾಯ ಸಮವರ್ತಿ -- ಮಂಕುತಿಮ್ಮ
— ಡಿ ವಿ ಜಿ

ಜೀವನ ಒಂದು ನಾಟಕವಿದ್ದಂತೆ. ಆದರಿಲ್ಲಿ ವಿಶ್ರಮಿಸಲು ಸೈಡ್ ವಿಂಗ್ ಗಳಿಲ್ಲ
— ಟಿ.ಪಿ.ಕೈಲಾಸಂ

ಮಾಡುವುದರಿಂದಲೇ ಏನಾದರೂ ಆಗುತ್ತದೆ. ಆದುದರಿಂದ ಕರ್ಮ ಮಾಡಲೇಬೇಕು. ಪ್ರಯತ್ನವನ್ನೇ ಪರಮೇಶ್ವರನೆಂದು ತಿಳಿಯಬೇಕು.
— ಸಮರ್ಥ ರಾಮದಾಸ

ಅಪ್ರಿಯವಾದ ಮಾತುಗಳು, ಸುಳ್ಳು, ಚಾಡಿ, ಅಸಂಗತವಾದ ಹರಟೆ ಇವು ನಾಲ್ಕು ಮಾತಿನಿಂದಾಗುವ ಪಾಪಕರ್ಮಗಳು.
— ಮನುಸ್ಮೃತಿ

ಮೂರಿಟ್ಟರಾರಕ್ಕು ಆರು ಹನ್ನೆರಡಕ್ಕು
ಹೇರುವ ಗೊಡ್ಡು ಹಯನಕ್ಕು ಗುರುಕರುಣ
ತೋರುವ ದಿನಕೆ ಸರ್ವಜ್ಞ
— ಸರ್ವಜ್ಞ

ನುಡಿಮುತ್ತುಗಳು - ೧೭

ಹಾವು ತಿಂದವರ ನುಡಿಸಬಹುದು
ಗರಹೊಡೆದವರ ನುಡಿಸಬಹುದು
ಸಿರಿಗರ ಹೊಡೆದವರ ನುಡಿಸಲು ಬಾರದು ನೋಡಯ್ಯ
ಬಡತನವೆಂಬ ಮಂತ್ರವಾದಿ ಹೊಗಲು
ಒಡನೆ ನುಡಿವರು ಕೂಡಲಸಂಗಮದೇವ
— ಬಸವಣ್ಣ

ಬೇರೆಯವರಿಗೆ ಕೆಡುಕನ್ನು ಬಯಸದಿರುವುದೇ ನ್ಯಾಯ.
— ಮನು

ಕಹಿ ನೆನಪು ಹಾಗೂ ನೋವುಗಳು ಮಾಯವಾಗದೇ ನಮ್ಮನ್ನು ಸದಾ ಕಾಡುತ್ತಿರುತ್ತವೆ
— ಮಾಕೃಮ

ಉಪ್ಪಿಗಿಂತ ರುಚಿಯಿಲ್ಲ ತಾಯಿಗಿಂತ ಬಂಧುವಿಲ್ಲ

ನೀವು ಮಾಡುವ ಕರ್ಮ (ಕೆಲಸ) ಮುಖ್ಯವಾಗಿಲ್ಲದೇ ಇರಬಹುದು, ಆದರೆ ಕರ್ಮ ಮಾಡುವುದು ಅತ್ಯಂತ ಅಗತ್ಯ.
— ಮಹಾತ್ಮ ಗಾಂಧಿ

ಎಲ್ಲಿ ಮಂಥನ ನಡೆಯುವುದೋ ಅಲ್ಲಿ ಉಚ್ಚ ಮಟ್ಟದ ಸತ್ಯ ಕೈಗೂಡದಿದ್ದರೂ ಕೆಳಮಟ್ಟದ ಸತ್ಯ ಕೈಗೆ ಹತ್ತುವುದೇ ಹೊರತು ಅಸತ್ಯ ಯಾವಾಗಲೂ ಕೈಗೆ ಬರದು.
— ವಿನೋಬಾ ಭಾವೆ

ಕೆಟ್ಟ ಪ್ರಪಂಚವಿದು, ಸುಟ್ಟ ಕರಿ ನರಮನಸು ।
ಬಿಟ್ಟುಬಿಡಲರಿದದನು, ಕಟ್ಟಿಕೊಳೆ ಮಷ್ಟು ।।
ಮುಷ್ಟಿ ಮುಟ್ಟದವೋಲುಪಾಯದಿಂ ನೋಡದನು ।
ಗಟ್ಟಿ ಪುರುಳೇನಿಲ್ಲ -- ಮಂಕುತಿಮ್ಮ ।।
— ಡಿ.ವಿ.ಜಿ

ನುಡಿಮುತ್ತುಗಳು - ೧೬

ವಿದ್ಯಾರ್ಥಿ ಭತ್ತ ಬೆಳೆಯುವ ಗದ್ದೆಗಳಾಗಬೇಕು, ಬರಿಯ ಚೀಲಗಳಾಗಬಾರದು
— ಕುವೆಂಪು

ಮಾತು ಮನಸ್ಸುಗಳನ್ನು ಒಂದುಗೂಡಿಸಬೇಕೆ ಹೊರತು ಒಡೆಯಬಾರದು
— ಮಾಸ್ತಿ

ನಿನ್ನ ಹೃದಯದಲ್ಲಿ ಜ್ಞಾನ ದೀಪವೊಂದನ್ನು ಹೊತ್ತಿಸು ಎಂದೆಂದಿಗೂ ಆರಲಾರದು
— ಎಪೋಶೇಷ

ಆಳುವಾಗ ಒಂಟಿಯಾಗಿ ಆಳು, ನಗುವಾಗ ಎಲ್ಲರೊಡನೆ ನಗು.
— ಥಾಮಸ್

ಕನ್ನಡಕ್ಕಾಗಿ ಕೈಯೆತ್ತು ನಿನ್ನ ಕೈ ಕಲ್ಪವೃಕ್ಷವಾಗುತ್ತದೆ
— ಕುವೆಂಪು

ನುಡಿಮುತ್ತುಗಳು - ೧೫

ಹೃದಯ ದೃಡವಾಗಿದ್ದರೆ ಸಂತೆಯಲ್ಲಿ ಕೂಡ ಆನೆಯನ್ನು ಎದುರಿಸಬಲ್ಲದು.
- ಟಿಬೆಟ್ ಗಾದೆ

ಹೃದಯ ಸತ್ಯವನ್ನೇ ಶೋಧಿಸಿ ತೆಗೆಯಬಲ್ಲ ಮಹಾನ್ ಭವಿಷ್ಯವಾದಿಯಾಗಿದೆ .
- ಕಾಲ್ದೆರನ್

ಉತ್ತಮ ಹೃದಯದವನಿಗೆ ಮುಖ ಕಂಡೊಡನೆಯೇ ಹೃದಯದ ಗೋಚರವಾಗುತ್ತದೆ.
- ನುಡಿಮುತ್ತು

ಭಾರತ ದಾತ್ಮ೦ ಕ೦ಗೆಡುತಿದೆ ಪರಸಾರಸ್ವತ ಸ೦ಪದ ಭರದಿ೦ತಾರಿ ಹೋಗಿತಿದೆ ತಾಯ್ನಾಡಿನ ಮನಏರುವಿದೇ ಸ್ವಪ್ರತ್ಯಯದಿ೦
— ಪು ತಿ ನ

ಜೀವನದ ಬೆಂಗಾಡಿನಲ್ಲಿ ಬೀಸುವ ತಂಗಾಳಿ ಮುಂದೆ ಸ್ನೇಹವೊಂದೆ
— ಠಾಕೂರ್

ಇವತ್ತಿನ ಹಾರೈಕೆ, ನಾಳಿನ ಪೂರೈಕೆ, ಇಂದಿನ ಕನಸು, ನಾಳೆಯ ನನಸು
— ಕುವೆಂಪು

ನುಡಿಮುತ್ತುಗಳು - ೧೪

ನಮಗಾದ ಆಘಾತಗಳನ್ನು ಮತ್ತು ಗಾಯಗಳನ್ನು ತಿರಸ್ಕರಿಸಿದರೆ, ಅವು ತಾವಾಗಿಯೇ ಮಾಯವಾಗುತ್ತವೆ.
— ಮಾರ್ಕಸ್ ಅರಿಲಿಯಸ್, ಗ್ರೀಕರ ದಂಡನಾಯಕ.

ನೀವು ಹಣಕ್ಕಾಗಿ ಕೆಲಸಮಾಡುವುದಿಲ್ಲ ಎಂಬ ಗುರಿಯನ್ನು ಖಂಡಿತಾ ಮುಟ್ಟಬಹುದು.
— ವಾಲ್ಟ್ ಡಿಸ್ನಿ

ನನ್ನ ಮನಸ್ಸಿನ ಅನುಭವಗಳಿಂದ ನಾನು ಬರೆಯುತ್ತೇನೆ, ಅದರೆ ಅನುಭವಗಳ ಬಗ್ಗೆ ಬರೆಯುವುದಿಲ್ಲ, ಅನುಭವಗಳಿಂದಾಗಿ ಬರೆಯುತ್ತೇನೆ.
— ಜಾನ್ ಅಶ್‌ಬೆರಿ

ಅಪ್ರಿಯವಾದ ಮಾತುಗಳು, ಸುಳ್ಳು, ಚಾಡಿ, ಅಸಂಗತವಾದ ಹರಟೆ ಇವು ನಾಲ್ಕು ಮಾತಿನಿಂದಾಗುವ ಪಾಪಕರ್ಮಗಳು.
— ಮನುಸ್ಮೃತಿ

ಮನಸೇ ಮನಸ್ಸಿನ ಮನಸ ನಿಲ್ಲಿಸುವುದು ಮನಸಿನ ಮನ ತಿಳಿಯುವ ಮನ ಬ್ಯಾರೆಲೋ ಮನಸೆ
— ಶಿಶುನಾಳ ಷರೀಫ್

ನಗುವು ಸಹಜದ ಧರ್ಮ
ನಗಿಸುವುದು ಪರ ಧರ್ಮ
ನಗುವ ನಗಿಸುತ ನಗಿಸಿ
ನಗುತ ಬಾಳುವ ವರವಮಿಗೆ
ನೀನು ಬೇಡಿಕೊಳೊ ಮಂಕುತಿಮ್ಮ
-ಡಿ.ವಿ.ಜಿ.

ಬಾಗಿಲನ್ನು ತಟ್ಟದ ಎಷ್ಟೋ ಜನ ತಮ್ಮ ಅವಕಾಶಗಳನ್ನು ಕಳೆದುಕೊಂಡಿದ್ದಾರೆ.
- ಬಲ್ಗೇರಿಯ ಗಾದೆ

ಹೆಂಡತಿ ಒಂದು ಕನ್ನಡಿ ಇದ್ದಂತೆ ,ಅದರಲ್ಲಿ ಕಾಣುವ ಪ್ರತಿಬಿಂಬವೇ ಪತಿ.
- ತ್ರಿವೇಣಿ


ನುಡಿಮುತ್ತುಗಳು - ೧೩

ಮ೦ಗಳವೆ೦ಬೆನು ಜಗಕಿದಕೆಲ್ಲಕುಹಿ೦ಗಲಿ ಭವ ತಾಪ೦ ದೋಷ೦ತ೦ಗಲಿ ಮನ ಶಮದೊಳು ನಿರ್ವೈರ್ಯ೦ಅ೦ಗವಿಸಲಿ ಸದ್ರಸತೋಷ೦.
— ಪು ತಿ ನ

ಮನುಷ್ಯನ ಉತ್ತಮ ಅಭ್ಯಾಸವೆಂದರೆ ತಮ್ಮ ಅತ್ಮಸಾಕ್ಷಿಯೊಡನೆ ಪ್ರಾಮಾಣಿಕತೆ.
— ಸಿಗ್ಮಂಡ್ ಫ್ರಾಯ್ಡ್

ಕವಿತೆಯೆಂದರೆ ಶಬ್ದಗಳ ಹಂದರವಲ್ಲ, ಜೀವನದೆಡೆಗಿನ ಅನುಸಂಧಾನದ ದೃಷ್ಟಿಕೋನ.
— ಜೇಮ್ಸ್ ಬ್ರಾಡ್‌ಸ್ಕಿ

ಪ್ರೀತಿಯು ಮನುಷ್ಯನನ್ನು ಹುಚ್ಚನನ್ನಾಗಿಸುತ್ತದೆ.
— ಸಿಗ್ಮಂಡ್ ಫ್ರಾಯ್ಡ್

ಸೂರ್ಯನ ಎಳೆಬಿಸಿಲಿನಲ್ಲಿ ಬದುಕಿರಿ, ಸಮುದ್ರವನ್ನೇ ಈಜಿರಿ, ಕಾನನದ ತಂಗಾಳಿಯನ್ನು ಸೇವಿಸಿರಿ...
— ಎಮರ್ಸನ್

ಭಾರತ ಚಿತ್ತವಪ್ಪಳಿಸುತಿವೆಬೇರೆಯ ನಾಡಿನ ಚಿತ್ತಗಳುಬೇರೆಯಾಗುತಿದೆ ಸ್ವ೦ತಿಕೆಯಳಿಯುತನೇರಗಾಣದೀ ಒತ್ತಿನೊಳು.
— ಪು ತಿ ನ

ಹಣವು ಗೊಬ್ಬರದಂತೆ; ನೀವು ಅದನ್ನು ಚೆನ್ನಾಗಿ ಹರಡಬೇಕು, ಇಲ್ಲದಿದ್ದರೆ ಅದು ಎಲ್ಲೆಡೆ ವಾಸನೆಯಾಗುತ್ತದೆ.
— ಜೆ. ಪಾಲ್ ಗೆಟ್ಟಿ


ನುಡಿಮುತ್ತುಗಳು - ೧೨

ನೀವು ಮಾನವೀಯತೆಯಲ್ಲಿ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬಾರದು. ಮಾನವೀಯತೆಯು ಸಮುದ್ರದಂತೆ; ಕೆಲ ಹನಿಗಳು ಅಪವಿತ್ರಗೊಂಡರೆ, ಸಮುದ್ರವೇ ಅಪವಿತ್ರವಾಗುವುದಿಲ್ಲ.
— ಮಹಾತ್ಮ ಗಾಂಧಿ

ಯಾವುದು ಕಾಲದ ಕಠಿಣ ಪರೀಕ್ಷೆಯಲ್ಲೂ ಅಚಲವಾಗಿರುತ್ತದೆಯೋ ಅದೇ ಸತ್ಯ.
— ಅಲ್‌ಬರ್ಟ್ ಐನ್‌ಸ್ಟೀನ್

ಕಿವುಡುತನ ತಪ್ಪೀತೆ ರನ್ನಕುಂಡಲದಿಂದ?
ತೊವಲು ಜಬ್ಬಲು ಬಿಳದೆ ಮೃಷ್ಟಾನ್ನದಿಂದ?
ಭುವಿಯ ಪರಿಣಾಮದಲಿ ಸಿರಿಬಡತನಗಳೊಂದೆ
ಜವರಾಯ ಸಮವರ್ತಿ -- ಮಂಕುತಿಮ್ಮ
— ಡಿ ವಿ ಜಿ

ಉತ್ತಮ ಗುರು ತನ್ನ ಶಿಷ್ಯರಿಂದಲೇ ಕಂಡು ಹಿಡಿಯಲ್ಪಡುತ್ತಾನೆ. ಯಾವ ಶಿಷ್ಯ ಗುರುವಿಗಿಂತ ಮುಂದೆ ಹೋಗುತ್ತಾನೋ ಅವನೇ ಉತ್ತಮ ಗುರು.
— ವಿನೋಬಾ ಭಾವೆ

"ನೀವು ಲೋಕವನ್ನಾಗಲೋ, ಸಮಾಜವನ್ನಾಗಲೀ, ಪುರೋಹಿತಶಾಹಿಯನ್ನಾಗಲೀ ಬದಲಾಯಿಸಲು ಪ್ರಯತ್ನಿಸುವ ಅಗತ್ಯ ಖಂಡಿತ ಇಲ್ಲ. ನೀವು ಮತ್ತು ನಿಮ್ಮ ಮನಸ್ಸು ಪರಿವರ್ತನೆ ಆಗದೆ ಏನೂ ಬದಲಾಗುವುದಿಲ್ಲ"
— ಕುವೆಂಪು

ನಮ್ಮಲ್ಲಿಲ್ಲದ ಗುಣ ಬೇರೆಯವರಲ್ಲಿದ್ದರೆ ಅದನ್ನು ನಮ್ಮಲ್ಲಿ ತರುವ ಪ್ರಯತ್ನ ಮಾಡಬಾರದು. ಹಾಗೆ ಮಾಡಲು ಹೊರಟರೆ ನಾವು ಪರಮಾತ್ಮನ ಬಳಿ ಹೋಗುವ ಬದಲು ಆ ಮನುಷ್ಯನ ಬಳಿ ಸೇರುತ್ತೇವೆ.
— ವಿನೋಬಾ ಭಾವೆ

ನುಡಿ ಮುತ್ತುಗಳು - ೧೧

ನೀವು ಮಾನವೀಯತೆಯಲ್ಲಿ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬಾರದು. ಮಾನವೀಯತೆಯು ಸಮುದ್ರದಂತೆ; ಕೆಲ ಹನಿಗಳು ಅಪವಿತ್ರಗೊಂಡರೆ, ಸಮುದ್ರವೇ ಅಪವಿತ್ರವಾಗುವುದಿಲ್ಲ.
— ಮಹಾತ್ಮ ಗಾಂಧಿ

ಧಾರುಣಿಯ ನಡಿಗೆಯಲಿ ಮೇರುವಿನ ಗುರಿಯಿರಲಿ
ಮೇರುವನು ಮರೆತಂದೆ ನಾರಕಕೆ ದಾರಿ
ದೂರವಾದೊಡದೇನು ಕಾಲು ಕುಂಟಿರಲೇನು
ಊರ ನೆನಪೇ ಬಲವು -- ಮಂಕುತಿಮ್ಮ
— ಡಿ.ವಿ.ಜಿ

ಯಾವಾಗಲೂ ಕೇಡುಬಗೆಯದ ಸ್ನೇಹಿತನೆಂದರೆ, ಮೌನ.
— ಕನ್‌ಫ್ಯೂಷಿಯಸ್

ಕರುಣೆಯೇ ಪರಮ ಜ್ಞಾನ.
— ಫಿಲಿಪ್ ಜೇಮ್ಸ್ ಬೈಲಿ

ಯಾವುದು ಕಾಲದ ಕಠಿಣ ಪರೀಕ್ಷೆಯಲ್ಲೂ ಅಚಲವಾಗಿರುತ್ತದೆಯೋ ಅದೇ ಸತ್ಯ.
— ಅಲ್‌ಬರ್ಟ್ ಐನ್‌ಸ್ಟೀನ್

ಒಂದು ಭಾಷೆ ಯಾವುದೇ ರಾಜ್ಯಕ್ಕಿಂತ ಪುರಾತನ ಮತ್ತು ಅನಿವಾರ್ಯವಾದುದು.
— ಜೇಮ್ಸ್ ಬ್ರಾಡ್‌ಸ್ಕಿ

ನುಡಿ ಮುತ್ತುಗಳು - ೧೦

ಇದೊಂದು ದೊಡ್ಡ ಸತ್ಯ; ಶಕ್ತಿಯೇ ಜೀವನ, ದುರ್ಬಲತೆಯೇ ಮರಣ; ಶಕ್ತಿಯೇ ಪರಮಾನಂದ, ಅಖಂಡಜೀವನ, ಅಮರತ್ವ. ದುರ್ಬಲತೆಯೇ ಅನವರತ ದುಃಖ, ತಳಮಳ, ದುರ್ಬಲತೆಯೇ ಮರಣ.

-ಸ್ವಾಮಿ ವಿವೇಕಾನಂದ

ತನ್ನೊಳಗೆ ನಗುವವನು ಜ್ಞಾನಿ
ತಾನೆ ನಗುವವನು ಹುಚ್ಚ
ತನ್ನ ಗೆಳತಿಯ ನೆನೆದು ನಗುವವನು ಪ್ರೇಮಿ
ಮೈ ಮರೆತು ನಗುವವನು ರಸಿಕ
ಇನ್ನೊಬ್ಬರಿಗಾಗಿ ನಗುವವನು ಅಯೋಗ್ಯ
ಇನ್ನೊಬ್ಬರಿಗೆ ನೋವಾಗುವಂತೆ ನಗುವವನು ಖಳನಾಯಕ
ನಕ್ಕು ಮನರಂಜನೆ ನೀಡುವವನು ವಿದೂಷಕ
ನಗುತ್ತಲೇ ವಿಜಯ ಸಾದಿಸುವವನು ಬುದ್ದಿವಂತ
ಗೆದ್ದರೂ ನಗದವನು ಕರ್ಮಯೋಗಿ.

''ಪೂರ್ವಾನುಭವಗಳ ಸ್ವಪ್ನಾರಣ್ಯದಲ್ಲಿ
ಪೋಲಿ ಪೋಲಿಯಾಗಿ ಅಲೆಯುವುದೇ ಹರಟೆ''
-ಕುವೆಂಪು

ಮ೦ಗಳವೆ೦ಬೆನು ಜಗಕಿದಕೆಲ್ಲಕುಹಿ೦ಗಲಿ ಭವ ತಾಪ೦ ದೋಷ೦ತ೦ಗಲಿ ಮನ ಶಮದೊಳು ನಿರ್ವೈರ್ಯ೦ಅ೦ಗವಿಸಲಿ ಸದ್ರಸತೋಷ೦.
— ಪು ತಿ ನ

ಕಿವುಡುತನ ತಪ್ಪೀತೆ ರನ್ನಕುಂಡಲದಿಂದ?
ತೊವಲು ಜಬ್ಬಲು ಬಿಳದೆ ಮೃಷ್ಟಾನ್ನದಿಂದ?
ಭುವಿಯ ಪರಿಣಾಮದಲಿ ಸಿರಿಬಡತನಗಳೊಂದೆ
ಜವರಾಯ ಸಮವರ್ತಿ -- ಮಂಕುತಿಮ್ಮ
— ಡಿ ವಿ ಜಿ

ನುಡಿ ಮುತ್ತುಗಳು - ೯

ಸ್ವೀಕರಿಸುವ ಮನಸಿದ್ದರೆ ಸದ್ಗುಣಗಳನ್ನು ಸ್ವೀಕರಿಸು
ಈಜುವ ಮನಸಿದ್ದರೆ ಜ್ಞಾನ ಸಾಗರದಲ್ಲಿ ಈಜು
ನಡೆಯುವ ಮನಸಿದ್ದರೆ ಸನ್ಮಾರ್ಗದಲ್ಲಿ ನಡೆ
ಮಾತನಾಡುವುದಿದ್ದರೆ ಸತ್ಯವನ್ನೇ ಮಾತನಾಡು
ಹಾಡುವುದಿದ್ದರೆ ಅನುಭವದ ಮಾತುಗಳನ್ನೇ ಹಾಡು
ಕೇಳುವುದಿದ್ದರೆ ಸದುಪದೇಶಗಳನ್ನು ಕೇಳು
ದೊರಕಿಸುವುದಿದ್ದರೆ ಜಯವನ್ನೇ ದೊರಕಿಸು
ನುಂಗುವ ಇಚ್ಚೆಯಿದ್ದರೆ ಸಿಟ್ಟನ್ನೇ ನುಂಗು

ಭಾರತೀಯರಲ್ಲಿ ದೊಡ್ಡದೊಂದು ದೋಷವಿದೆ.ನಾವು ಒಂದು ಸ್ಥಿರವಾದ ಸಂಸ್ಥೆಯನ್ನು ಕಟ್ಟಲಾರೆವು. ಕಾರಣವೇನೆಂದರೆ ಅಧಿಕಾರವನ್ನು ಇತರರೊಂದಿಗೆ ಹಂಚಿಕೊಳ್ಳುವುದು ನಮಗೆ ಇಷ್ಟವಿಲ್ಲ. ನಾವು ಕಾಲವಾದ ಮೇಲೆ ಇದರ ಗತಿ ಏನೆಂಬುದನ್ನು ಕುರಿತು ಚಿಂತಿಸುವುದೇ ಇಲ್ಲ.
- ಸ್ವಾಮಿ ವಿವೇಕಾನಂದ

ವಿಕಾಸವೇ ಜೀವನ;ಸಂಕೋಚವೇ ಮರಣ. ಪ್ರೇಮವೆಲ್ಲಾ ವಿಕಾಸ,ಸ್ವಾರ್ಥವೆಲ್ಲಾ ಸಂಕೋಚ. ಆದ್ದರಿಂದ ಪ್ರೇಮವೇ ಬದುಕಿನ ಧರ್ಮ.
- ಸ್ವಾಮಿ ವಿವೇಕಾನಂದ

ಶಿಕ್ಷಣವೆಂದರೆ ಮೊದಲೇ ಮನುಷ್ಯನಲ್ಲಿ ಇರುವ ಪರಿಪೂರ್ಣತೆಯನ್ನು ಪ್ರಕಾಶಪಡಿಸುವುದು.
- ಸ್ವಾಮಿ ವಿವೇಕಾನಂದ

ನೀವು ಯಾವುದೇ ಕೆಲಸವನ್ನು ಮಾಡುವಾಗಲೂ ನಿಮ್ಮ ಮನಸ್ಸು ಹೃದಯ, ನಿಮ್ಮ ಸರ್ವಸ್ವವನ್ನೂ ಆಕೆಲಸಕ್ಕೆ ಕೊಡಿ. ನಾನೊಮ್ಮೆ ಒಬ್ಬ ಸಾಧು ಮಹಾತ್ಮನನ್ನು ನೋಡಿದ್ದೆ. ಆತ ಪೂಜೆ, ಧ್ಯಾನಗಳನ್ನು ಎಷ್ಟು ಏಕಾಗ್ರತೆ ಶ್ರದ್ಧೆಗಳಿಂದ ಮಾಡುತ್ತಿದ್ದನೋ ಅಷ್ಟೇ ಸಾವಧಾನದಿಂದ ತನ್ನ ಆಡುಗೆ ಮಾಡುವ ಹಿತ್ತಾಳೆ ಪಾತ್ರೆಗಳನ್ನು ಫಳ ಫಳನೆಹೊಳೆಯುವ ಚಿನ್ನದಂತೆ ತೊಳೆದಿಡುತ್ತಿದ್ದನು.

- ಸ್ವಾಮಿ ವಿವೇಕಾನಂದ


ನುಡಿ ಮುತ್ತುಗಳು - ೮

ನಾವು ಬುಧ್ಧಿವಂತಿಕೆಯನ್ನು ನಮ್ಮ ದೇವರಾಗಿಸಿಕೊಳ್ಳಬಾರದು; ಬುಧ್ಧಿವಂತಿಕೆಗೆ ಶಕ್ತಿಶಾಲಿ ಸ್ನಾಯುಗಳಿರ ಬಹುದು, ಆದರೆ ಯಾವುದೇ ವ್ಯಕ್ತಿತ್ವವಿಲ್ಲ.
— ಅಲ್‌ಬರ್ಟ್ ಐನ್‌ಸ್ಟೀನ್

ಪ್ರೀತಿ ಮತ್ತು ಗಾಜುಗಳು ಒಂದು ನಾಣ್ಯದ ಎರಡು ಮುಖಗಳಿದ್ದಂತೆ... ಒಮ್ಮೆ ಒಡೆದರೆ ಮತ್ತೆ ಜೋಡಿಸಲು ಕಷ್ಟ...

ಎಲ್ಲರಲ್ಲಿಯೂ ಪ್ರೀತಿ, ಸ್ನೇಹಗಳನ್ನು ಕಾಣುವುದಕ್ಕಿಂತ ಮಹದಾನಂದ ಯಾವುದಿದೆ?
— ಜೇಮ್ಸ್ ಬ್ರಾಡ್‌ಸ್ಕಿ

ಮಾನವರು ಯುಧ್ಧಕ್ಕೆ ಅಂತ್ಯವನ್ನು ತರಬೇಕು, ಇಲ್ಲದಿದ್ದರೆ ಯುಧ್ಧ ಎಲ್ಲರಿಗೂ ಅಂತ್ಯವನ್ನು ತರುತ್ತದೆ.
— ಜಾನ್ ಕೆನಡಿ

ಅಪ್ರಿಯವಾದ ಮಾತುಗಳು, ಸುಳ್ಳು, ಚಾಡಿ, ಅಸಂಗತವಾದ ಹರಟೆ ಇವು ನಾಲ್ಕು ಮಾತಿನಿಂದಾಗುವ ಪಾಪಕರ್ಮಗಳು.
— ಮನುಸ್ಮೃತಿ

ಹಣವು ಗೊಬ್ಬರದಂತೆ; ನೀವು ಅದನ್ನು ಚೆನ್ನಾಗಿ ಹರಡಬೇಕು, ಇಲ್ಲದಿದ್ದರೆ ಅದು ಎಲ್ಲೆಡೆ ವಾಸನೆಯಾಗುತ್ತದೆ.
— ಜೆ. ಪಾಲ್ ಗೆಟ್ಟಿ


ನುಡಿ ಮುತ್ತುಗಳು - ೭

ಕೊನೆಯಲ್ಲಿ ನಮ್ಮ ನೆನಪಿಗುಳಿಯುವುದು ನಮ್ಮ ಶತ್ರುಗಳ ಮಾತಲ್ಲ, ನಮ್ಮ ಮಿತ್ರರ ಮೌನ.
— ಮಾರ್ಟಿನ್ ಲೂಥರ್ ಕಿಂಗ್ ಜ್ಯೂನಿಯರ್

ಹಸಿವು ಒಂದು ರೋಗ ಎಂದು ತಿಳಿದುಕೋ. ಭಿಕ್ಷೆ ದೊರಕಿದುದನ್ನು ಔಷಢ ಎಂದು ಸೇವಿಸು. ಸಿಹಿಯನ್ನು ಬೇಡದಿರು. ದೊರೆತುದುದನ್ನು ಸೇವಿಸು. ರೋಗಕ್ಕೆ ಎಷ್ಟು ಪ್ರಮಾಣದ ಔಷಧ ಬೇಕೋ ಅಷ್ಟೇ ಆಹಾರ ಸೇವಿಸು. ಹೆಚ್ಚಲ್ಲ ಕಡಿಮೆಯಲ್ಲ.
— ಶಂಕರಾಚಾರ್ಯರು


ನಾವೆಲ್ಲರೂ ಸಹೋದರರಂತೆ ಸಹಬಾಳ್ವೆಯನ್ನು ನೆಡೆಸುವುದನ್ನ ಕಲಿಯಬೇಕು, ಇಲ್ಲದಿದ್ದರೆ ಮೂರ್ಖರಂತೆ ನಾಶವಾಗಬೇಕು.
— ಮಾರ್ಟಿನ್ ಲೂಥರ್ ಕಿಂಗ್ ಜ್ಯೂನಿಯರ್

ಕಣ್ಣಿಗೆ ಕಣ್ಣು ತತ್ವವು ಇಡೀ ಜಗತ್ತನ್ನು ಕುರುಡಾಗಿಸುವುದು
— ಮಹಾತ್ಮಾ ಗಾಂಧಿ

ಹೊಗೆ-ಎಂಜಿನ್ ಪೋಪೊಪೆಡೆ,
ಹಿಟ್ಲರ್ ಪಡೆ ಹಾಕಿದರೂ ಮಟ್ಟ.
ಧೃತಿಗೆಡದೆ ಹೊಗೆಯುಗುಳುತಿದೆ
ಚರ್ಚಿಲನ ಚುಟ್ಟ.
— ಬಿಳಿಗಿರಿ

ನುಡಿ ಮುತ್ತುಗಳು - ೬

ಎಲ್ಲರೂ ತಮ್ಮನ್ನು ಬುದ್ಧಿವಂತರೆಂದುಕೊಂಡಿರುವುದರಿಂದಲೇ ಪ್ರಪಂಚದಲ್ಲಿ ಇಷ್ಟು ಮಂದಿ ಮೂರ್ಖರಿರುವುದು.

ನುಡಿಯೊಳು ಹೊಳೆವುದು ನಾಡಿನ ನಡವಳಿ.
ನುಡಿಯೊಳು ಕ೦ಪಿಡುವುದು ಬದುಕು
ನುಡಿಯಿರದವನಿಗೆ ಇಲ್ಲವು ನಾಡೂ
ನುಡಿಯಲಿ ಸಲ್ಲನದಾವುದಕೂ.
— ಪು ತಿ ನ

ಕೆಟ್ಟ ಸಾಹಿತ್ಯವು ಒಂದು ರೀತಿಯ ದೇಶ ದ್ರೋಹ.
— ಜೇಮ್ಸ್ ಬ್ರಾಡ್‌ಸ್ಕಿ

ಮನಸೇ ಮನಸ್ಸಿನ ಮನಸ ನಿಲ್ಲಿಸುವುದು ಮನಸಿನ ಮನ ತಿಳಿಯುವ ಮನ ಬ್ಯಾರೆಲೋ ಮನಸೆ
— ಶಿಶುನಾಳ ಷರೀಫ್

ವನ್ಯಮೃಗಗಳ ನಡುವೆ ಗೋವು ಬಂದೇನಿಹುದು? ।
ಪಣ್ಯವೀಧಿಯಲಿ ತಾತ್ವಿಕನಿಗೇನಿಹದು? ।।
ಅನ್ಯಾಯದುನ್ಮತ್ತ ಕೋಲಾಹಲದ ಲೋಕ ।
ಪುಣ್ಯವನು ಚಿಂತಿಪುದೆ? -- ಮಂಕುತಿಮ್ಮ ।।
— ಡಿ.ವಿ.ಜಿ.


ನುಡಿ ಮುತ್ತುಗಳು - ೫

ಲಕ್ಶ್ಮಿ ಇರುವಲ್ಲಿ ಆಪತ್ತುಗಳು ಬಾಗಿಲು ತೆರೆದಿಟ್ಟಂತೆ ಧುಮ್ಮಿಕ್ಕುತ್ತವೆ.

ಎನಿತು ಜನ್ಮದಲಿ, ಎನಿತು ಜೀವರಿಗೆ, ಎನಿತು ನಾವು ಋಣಿಯೋ? ತಿಳಿದು ನೋಡಿದರೆ ಬಾಳು ಎಂಬುದಿದು ಋಣದ ರತ್ನಗಣಿಯೋ!

ನಿಮ್ಮ ಪ್ರೀತಿಯನ್ನು ಮೆಚ್ಚುಗೆಯನ್ನು ನಿಮ್ಮವರಿಗೆ ಇಂದೇ ಹೇಳಿ. ನಾಳೆಗೆ ಈ ಅವಕಾಶ ಸಿಗದೇ ಇರಬಹುದು.

ತನ್ನ ಸುಖದಲ್ಲಿ ಹರ್ಷಗೊಳ್ಳದೆ, ಇತರರ ದುಃಖದಲ್ಲಿ ಹರ್ಷಗೊಳ್ಳದೆ, ಕೊಟ್ಟು ಸಂಕಟಪಡದೇ ಇರುವವನೇ ಸಜ್ಜನ.

ಹೊಟ್ಟೆಗೆ ಕಿವಿ ಇಲ್ಲವಾದ್ದರಿಂದ ಹಸಿದವನ ಮುಂದೆ ಭಾಷಣ ಮಾಡುವುದು ವ್ಯರ್ಥ.

ಎಷ್ಟೋ ಬಾರಿ ಗೆಲವು ಸೋಲಿನ ರೂಪದಲ್ಲಿ ಬರುತ್ತದೆ....

ನುಡಿ ಮುತ್ತುಗಳು - ೪

ಲೆಕ್ಕಕ್ಕೇ ಇಲ್ಲದಿರುವುದಕ್ಕಿಂತ ಟೀಕೆಗೆ ಗುರಿಯಾಗುವುದು ಲೇಸು.

"ಭಾಷೆಯು ಭಾವನೆಯ ಪ್ರತಿಬಿಂಬ"
— ಶ್ರೀರಂಗ

ಮಾಡಲು ಕೈಲಾದವನು ಮಾಡುತ್ತಾನೆ. ಮಾಡಲಾಗದವನು ಉಪದೇಶ ಮಾಡುತ್ತಾನೆ.

ಆತ್ಮವಿಶ್ವಾಸ ಕಡಿಮೆಯಾಗುತ್ತಾ ಹೋದಂತೆ ಮುಖವಾಡಗಳ ಅಗತ್ಯ ಹೆಚ್ಚುತ್ತಾ ಹೋಗುತ್ತದೆ.

ಕಡು ಬಡತನವೆಂದರೆ ಒಂಟಿತನ ಮತ್ತು ಪ್ರೀತಿಗೆ ಅನರ್ಹನೆಂಬ ಭಾವನೆ...
— ಮದರ್ ತೆರೆಸಾ

ಯೌವ್ವನ, ಧನ, ಅಧಿಕಾರ, ಅವಿವೇಕ - ಇವು ಒಂದೊಂದೇ ಅನರ್ಥಕಾರಿ. ಇನ್ನು ನಾಲ್ಕೂ ಇರುವಲ್ಲಿ ಕೇಳುವುದೇನು!

ನುಡಿ ಮುತ್ತುಗಳು - ೩

ಕೆಟ್ಟ ಸಾಹಿತ್ಯವು ಒಂದು ರೀತಿಯ ದೇಶ ದ್ರೋಹ.
— ಜೇಮ್ಸ್ ಬ್ರಾಡ್‌ಸ್ಕಿ

ಕೈನಿಂದ ಕೆಲಸವಾಗಲಿ ಮತ್ತು ಹೃದಯದಲ್ಲಿ ಭಕ್ತಿ ಇರಲಿ
— ವಿನೋಬಾ ಭಾವೆ

ಭಕ್ತಿಯ ಉಗಮ ಭೀತಿಯಿಂದಲ್ಲ ಪ್ರೀತಿಯಿಂದ ಆಯಿತು. ಮನುಷ್ಯನಿಗೆ ಭೀತಿ ಎಷ್ಟು ಸ್ವಾಭಾವಿಕವೋ, ಪ್ರೀತಿ ಅದಕ್ಕಿಂತ ಹೆಚ್ಚು ಸ್ವಾಭಾವಿಕ. ಮನುಷ್ಯನಿಗೆ ಭೀತಿಗಿಂತ ಮೊದಲು ಪ್ರೀತಿಯ ಅನುಭವವಾಗುತ್ತದೆ.
— ವಿನೋಬಾ ಭಾವೆ

ಕೊನೆಯಲ್ಲಿ ನಮ್ಮ ನೆನಪಿಗುಳಿಯುವುದು ನಮ್ಮ ಶತ್ರುಗಳ ಮಾತಲ್ಲ, ನಮ್ಮ ಮಿತ್ರರ ಮೌನ.
— ಮಾರ್ಟಿನ್ ಲೂಥರ್ ಕಿಂಗ್ ಜ್ಯೂನಿಯರ್

ನಿನ್ನ ದೊಡ್ಡ ನೆರಳನ್ನು ನೋಡಿ ಹೆದರುವ ಅಥವಾ ಭಯ ಪಡುವ ಕಾರಣವಿಲ್ಲ. ಅದು ನಿನ್ನ ಗುಲಾಮ. ನಿನ್ನ ಆಜ್ಞೆಯಂತೆ ನಡೆಯುತ್ತದೆ. ನೀನು ನಿಂತರೆ ಅದೂ ನಿಲ್ಲುವುದು, ನೀನು ಕುಳಿತರೆ ಅದೂ ಕುಳಿತುಕೊಳ್ಳುವುದು.
— ವಿನೋಬಾ ಭಾವೆ

ಕುಲಗೆಟ್ಟವರ ಚಿಂತೆ ಒಳಗಿರ್ಪರಂತಲ್ಲ
ಕುಲಗೆಟ್ಟು ಶಿವನ ಮರೆಹೊಕ್ಕು ಋಷಿಗಳು
ಕುಲವಾದರಯ್ಯ ಸರ್ವಜ್ಞ
— ಸರ್ವಜ್ಞ

ನುಡಿ ಮುತ್ತುಗಳು - ೨

ಕೆಟ್ಟ ಪ್ರಪಂಚವಿದು, ಸುಟ್ಟ ಕರಿ ನರಮನಸು ।
ಬಿಟ್ಟುಬಿಡಲರಿದದನು, ಕಟ್ಟಿಕೊಳೆ ಮಷ್ಟು ।।
ಮುಷ್ಟಿ ಮುಟ್ಟದವೋಲುಪಾಯದಿಂ ನೋಡದನು ।
ಗಟ್ಟಿ ಪುರುಳೇನಿಲ್ಲ -- ಮಂಕುತಿಮ್ಮ ।।
— ಡಿ.ವಿ.ಜಿ

ಭಾರತ ಚಿತ್ತವಪ್ಪಳಿಸುತಿವೆ
ಬೇರೆಯ ನಾಡಿನ ಚಿತ್ತಗಳು
ಬೇರೆಯಾಗುತಿದೆ ಸ್ವ೦ತಿಕೆಯಳಿಯುತ
ನೇರಗಾಣದೀ ಒತ್ತಿನೊಳು.
— ಪು ತಿ ನ


*ವೇದ ಸುಳ್ಳಾದರೂ ಗಾದೆ ಸುಳ್ಳಾಗದು

*ಆನೆ ನಡೆದದ್ದೇ ಹಾದಿ

*ಕೈ ಕೆಸರಾದರೆ ಬಾಯಿ ಮೊಸರು

*ಹುಟ್ಟುಗುಣ ಸುಟ್ಟ್ರೂ ಹೋಗಲ್ಲ

*ನೀ ನನಗಾದರೆ ನಾ ನಿನಗೆ

*ಮಾತು ಮನೆ ಕೆಡಿಸಿತು ತೂತು ಒಲೆ ಕೆಡಿಸಿತು


ಯಾರ ಯೋಗ್ಯತೆಯನ್ನು ಅವರ ಲೋಪಗಳ ಆಧಾರದ ಮೇಲೆ ನಿರ್ಣಯಿಸಬಾರದು.


ನುಡಿ ಮುತ್ತುಗಳು - ೧

ಉತ್ತಮ ಗುರು ತನ್ನ ಶಿಷ್ಯರಿಂದಲೇ ಕಂಡು ಹಿಡಿಯಲ್ಪಡುತ್ತಾನೆ. ಯಾವ ಶಿಷ್ಯ ಗುರುವಿಗಿಂತ ಮುಂದೆ ಹೋಗುತ್ತಾನೋ ಅವನೇ ಉತ್ತಮ ಗುರು.
— ವಿನೋಬಾ ಭಾವೆ

ಹಸಿವು ಒಂದು ರೋಗ ಎಂದು ತಿಳಿದುಕೋ. ಭಿಕ್ಷೆ ದೊರಕಿದುದನ್ನು ಔಷಢ ಎಂದು ಸೇವಿಸು. ಸಿಹಿಯನ್ನು ಬೇಡದಿರು. ದೊರೆತುದುದನ್ನು ಸೇವಿಸು. ರೋಗಕ್ಕೆ ಎಷ್ಟು ಪ್ರಮಾಣದ ಔಷಧ ಬೇಕೋ ಅಷ್ಟೇ ಆಹಾರ ಸೇವಿಸು. ಹೆಚ್ಚಲ್ಲ ಕಡಿಮೆಯಲ್ಲ.
— ಶಂಕರಾಚಾರ್ಯರು

"ನಾನು ಅವಧೂತನಾಗಿ ಹೋಗುವುದಿಲ್ಲ. ಕನ್ನಡವು ತನ್ನ ಸ್ಥಾನವನ್ನು ಅಧಿಕೃತವಾಗಿ ಪಡೆಯುವತನಕ, ನನ್ನ ಪ್ರಾಣವಿರುವತನಕ, ಕನ್ನಡಕ್ಕಾಗಿ ದುಡಿಯುವುದು, ಕನ್ನಡಕ್ಕಾಗಿ ವ್ಯಕ್ತಿಗಳನ್ನು ದುಡಿಯಲು ಪ್ರಚೋದಿಸುವುದು, ಅದಕ್ಕಾಗಿ ಭಗವಂತನಲ್ಲಿ ಮೊರೆಯಿಡುವುದು ಮಾಡುತ್ತೇನೆ. ನನ್ನೆಲ್ಲ ತಪಃಶಕ್ತಿಯನ್ನು ಅಥವಾ ಪ್ರಾರ್ಥನಾ ಶಕ್ತಿಯನ್ನು ಕನ್ನಡದ ಸೇವೆಗಾಗಿ ಮೀಸಲಿಡುತ್ತೇನೆ.... "
— ಕುವೆಂಪು ('ಕನ್ನಡ ದೀಕ್ಷೆ)

ಹಸಿವು ಒಂದು ರೋಗ ಎಂದು ತಿಳಿದುಕೋ. ಭಿಕ್ಷೆ ದೊರಕಿದುದನ್ನು ಔಷಢ ಎಂದು ಸೇವಿಸು. ಸಿಹಿಯನ್ನು ಬೇಡದಿರು. ದೊರೆತುದುದನ್ನು ಸೇವಿಸು. ರೋಗಕ್ಕೆ ಎಷ್ಟು ಪ್ರಮಾಣದ ಔಷಧ ಬೇಕೋ ಅಷ್ಟೇ ಆಹಾರ ಸೇವಿಸು. ಹೆಚ್ಚಲ್ಲ ಕಡಿಮೆಯಲ್ಲ.
— ಶಂಕರಾಚಾರ್ಯರು

ಭುಕ್ತಿಪಥ ಮುಕ್ತಿಪಥ ಬೇರೆಬೇರೆಯವಲ್ಲ |
ಯುಕ್ತದಿಂದೆರಡುಮಂಚುಗಳೊಂದೆ ಪಥಕೆ ||
ಸತ್ತ್ವಶೋಧನೆ ಲೋಕಸಂಸ್ಕಾರದಿಂ ನಿನಗೆ |
ಶಕ್ತಿಯಧ್ಯಾತ್ಮಕದು -- ಮಂಕುತಿಮ್ಮ ||
— ಡಿ ವಿ ಜಿ

Saturday, May 30, 2009

ನುಡಿ ಮುತ್ತುಗಳು