ಜನವರೀ 16, 2013

ನುಡಿಮುತ್ತುಗಳು-55

"ಸಾಧನೆಗೆ ಗುರಿಗಿಂತ ಛಲವೇ ಮುಖ್ಯ"

"ಪ್ರತಿಫಲದ ಅಪೇಕ್ಷೆಯಿಲ್ಲದೆ ಮಾಡಿದ ಸಹಾಯ ಎಂದಿಗೂ ದೊಡ್ಡದು."
 

"ಜೀವನದಲ್ಲಿ ನೀನೊಬ್ಬನೇ ಏನಾದರೂ ಸಾಧಿಸಿ ಮೇಲೆ ಬರುವುದಕ್ಕಿಂತ ಹತ್ತು ಜನರನ್ನ ಮೇಲೆ ತಂದರೆ ಅದಕ್ಕಿಂತ ದೊಡ್ಡ ಸಾಧನೆ ಬೇರೊಂದಿಲ್ಲ."
 

"ಜೀವನದಲ್ಲಿ ಎಂದೂ ಯಾರಿಂದಲೂ ಸಹಾಯದ ಅಪೇಕ್ಷೆಯನ್ನ ಇಡಬಾರದು. ಯಾಕೆಂದರೆ ನಾವು ಕಷ್ಟದಲ್ಲಿ ಇದ್ದಾಗ ಯಾರಾದರೂ ಸಹಾಯ ಮಾಡದಿದ್ದರೆ ಅದಕ್ಕಿಂತ ದೊಡ್ಡ ಯಾತನೆ ಬೇರೊಂದಿಲ್ಲ."
 

"ದೇವರಲ್ಲಿ ಎಂದಿಗೂ ಕೇವಲ ಸ್ವಂತದ ಏಳಿಗೆಯಾಗಲಿ ಅಂತ ಬೇಡಿಕೊಳ್ಳದೆ ಹತ್ತು ಜನರ ಏಳಿಗೆಯಾಗಲಿ ಅಂತ ಬೇಡಿಕೊಳ್ಳಿ. ದೇವರ ಕೊಡುವ ವರಕ್ಕಿಂತ ಆ ಹತ್ತು ಜನರನ್ನ ಉದ್ಧಾರ ಮಾಡಿದ ಪುಣ್ಯ ಎಷ್ಟೋ ದೊಡ್ಡದು"
 

"ಮನುಷ್ಯನಿಗೆ ಯಾವಾಗ ಒಂದು ವಸ್ತು ಸುಲಭವಾಗಿ ಸಿಗುವ ಹಾಗೆ ಇರುತ್ತೋ ಆಗ ಅದರ ಬೆಲೆ ಗೊತ್ತಿರುವುದಿಲ್ಲ, ಆದರೆ ಯಾವಾಗ ಆ ವಸ್ತುವಿನ ಬೆಲೆ ತಿಳಿಯುತ್ತದೋ ಆಗ ಅದು ಸುಲಭವಾಗಿ ಸಿಗುವುದಿಲ್ಲ."
 

ನುಡಿಮುತ್ತುಗಳು-54

ಸರಸ್ವತಿಯೇ, ನಿನ್ನ ಬಳಿ ವಿದ್ಯೆಯೆಂಬ ಅಪರೂಪದ ಭಂಡಾರವೊಂದಿದೆ.
ಬೇರೆಲ್ಲ ಸಂಪತ್ತುಗಳೂ ಹಂಚಿಕೊಂಡಷ್ಟೂ ಕ್ಷೀಣಿಸುತ್ತವೆ.
ಆದರೆ (ನಿನ್ನ ಬಳಿಯಿರುವ) ವಿದ್ಯೆಯೆಂಬ ಸಂಪತ್ತು ಮಾತ್ರ
ಹಂಚಿಕೊಂಡಷ್ಟೂ ವೃದ್ಧಿಸುತ್ತದೆ ಮತ್ತು ಗೋಪ್ಯವಾಗಿಟ್ಟಷ್ಟೂ ಕ್ಷೀಣಿಸುತ್ತದೆ!
- ಸಂಸ್ಕೃತ ಸುಭಾಷಿತ
ಕಾದ ಕಾವಲಿಯ ಮೇಲೆ ಬಿದ್ದ ನೀರ ಹನಿಯೊಂದು ಆವಿಯಾಗಿ ತನ್ನ ಸ್ವರೂಪವನ್ನೇ ಕಳೆದುಕೊಳ್ಳುತ್ತದೆ.
ಕಮಲದೆಲೆಯ ಮೇಲೆ ಬಿದ್ದ ಅದೇ ನೀರ ಹನಿಯು ಸೂರ್ಯನ ಬೆಳಕಿನಲ್ಲಿ ಮುತ್ತಿನಂತೆ ಕಂಗೊಳಿಸುತ್ತದೆ.
ಸ್ವಾತಿ ನಕ್ಷತ್ರದಲ್ಲಿ ಕಪ್ಪೆಚಿಪ್ಪನ್ನು ಪ್ರವೇಶಿಸಿದ ಅದೇ ನೀರ ಹನಿಯು ಅನರ್ಘ್ಯವಾದ ಮುತ್ತೇ ಆಗುತ್ತದೆ.
ಹೀಗೆ ಉತ್ತಮ, ಮಧ್ಯಮ ಮತ್ತು ಅಧಮವೆಂಬ ಮೂರು ಗುಣಗಳೂ ಸಹವಾಸದಿಂದ ಉಂಟಾಗುತ್ತವೆ!
- ಭರ್ತೃಹರಿಯ ನೀತಿಶತಕ


ಕಾಗೆ ಕಪ್ಪು. ಕೋಗಿಲೆ ಕೂಡಾ ಕಪ್ಪು. ಹಾಗಾದರೆ ಕಾಗೆ-ಕೋಗಿಲೆಗಳ ನಡುವಣ ವ್ಯತ್ಯಾಸ ತಿಳಿಯುವುದು ಹೇಗೆ?
ಬಹಳ ಸುಲಭ; ವಸಂತಮಾಸ ಬಂದೊಡನೆ ಕಾಗೆ ಕಾಗೆಯೇ, ಕೋಗಿಲೆ ಕೋಗಿಲೆಯೇ!
(ವಸಂತಮಾಸದಲ್ಲಿ ಮಾವು ಚಿಗುರುವುದರಿಂದ ಕೋಗಿಲೆ ಇಂಪಾದ ದನಿಯಲ್ಲಿ ಹಾಡುತ್ತದೆ. ಕಾಗೆಗದು ಅಸಾಧ್ಯ ಎಂಬರ್ಥದಲ್ಲಿ)
- ಸಂಸ್ಕೃತ ಸುಭಾಷಿತ


ಲಕ್ಷ್ಮಣ, ಲಂಕೆಯು ಸುವರ್ಣಮಯ ರಾಜ್ಯವೇ ಆದರೂ ಅದು ನನ್ನನ್ನು ಆಕರ್ಷಿಸುತ್ತಿಲ್ಲ.
(ಏಕೆಂದರೆ) ತಾಯಿ ಮತ್ತು ತಾಯ್ನಾಡು ಸ್ವರ್ಗಕ್ಕಿಂತಲೂ ಕೂಡಾ ಮಿಗಿಲಾದುವು!
- ವಾಲ್ಮೀಕಿ ರಾಮಾಯಣ (ರಾಮನು ರಾವಣನನ್ನು ಸಂಹರಿಸಿದ ಬಳಿಕ ಲಕ್ಷ್ಮಣನಿಗೆ ಹೇಳುವ ಮಾತು)



ಹೇಗೆ ಹಾಲು, ಮೊಸರುಗಳಿಗಿಂತ ತಡವಾಗಿ ಹುಟ್ಟಿದರೂ ತುಪ್ಪವು ಹಾಲು, ಮೊಸರುಗಳಿಗಿಂತ ಶ್ರೇಷ್ಠ ಎನಿಸಿಕೊಳ್ಳುವುದೋ,
ಹಾಗೆಯೇ ಹಿರಿತನವೆನ್ನುವುದು ಉತ್ತಮ ಗುಣಗಳಿಂದಾಗಿ ಲಭ್ಯವಾಗುವುದೇ ಹೊರತು ಕೇವಲ ವಯಸ್ಸಿನಿಂದಲ್ಲ.
- ಸಂಸ್ಕೃತ ಸುಭಾಷಿತ

ನುಡಿಮುತ್ತುಗಳು-53

ನಮ್ಮಲ್ಲಿ ನಾವು ವಿಶ್ವಾಸ ಕಳೆದುಕೊಳ್ಳದಿರುವುದು ಮತ್ತು ನಮ್ಮನ್ನು ನಾವು ದ್ವೇಷಿಸದಿರುವುದೇ ನಮ್ಮ ಮೊದಲ ಕರ್ತವ್ಯ. ಮೊದಲು ನಮ್ಮ ಬಗ್ಗೆ ನಮಗೆ ನಂಬಿಕೆಯಿದ್ದಲ್ಲಿ ಮಾತ್ರ ಭಗವಂತನಲ್ಲಿ ನಂಬಿಕೆಯಿಡಲು ಸಾಧ್ಯ. ತನ್ನನ್ನೇ ನಂಬದವನು ಭಗವಂತನನ್ನು ಹೇಗೆ ತಾನೇ ನಂಬಲು ಸಾಧ್ಯ?!- ಸ್ವಾಮಿ ವಿವೇಕಾನಂದ

ಒಂದು ಆದರ್ಶವನ್ನು, ಗುರಿಯನ್ನು ಕೈಗೆತ್ತಿಕೊಳ್ಳಿ. ಕೇವಲ ಆ ಗುರಿಯ ಬಗ್ಗೆ ಮಾತ್ರ ಯೋಚಿಸಿ, ಚಿಂತಿಸಿ. ನಿಮ್ಮ ಬದುಕನ್ನೇ ಅದಕ್ಕಾಗಿ ಮುಡಿಪಾಗಿಡಿ. ಆ ಗುರಿಯು ನಿಮ್ಮ ಬುದ್ಧಿ, ಮನಸ್ಸು, ಇಂದ್ರಿಯಗಳು, ನರ-ನಾಡಿಗಳನ್ನೆಲ್ಲ ವ್ಯಾಪಿಸಲಿ. ಬೇರೆಲ್ಲ ಆಲೋಚನೆಗಳನ್ನು ಬದಿಗಿಡಿ. ಇದೇ ಯಶಸ್ಸಿನ ಏಕಮಾತ್ರ ಸೂತ್ರ!- ಸ್ವಾಮಿ ವಿವೇಕಾನಂದ

ಆಧ್ಯಾತ್ಮಿಕ ಮತ್ತು ಧಾರ್ಮಿಕ ಪ್ರಗತಿಯ ಮೊದಲ ಗುರುತು ಸದಾ ಹಸನ್ಮುಖಿಯಾಗಿರುವುದು!- ಸ್ವಾಮಿ ವಿವೇಕಾನಂದ

ಈ ಜಗತ್ತೆನ್ನುವುದು ನಮ್ಮನ್ನು ನಾವು ಗಟ್ಟಿಗೊಳಸಲೆಂದೇ ಇರುವ ವ್ಯಾಯಾಮಶಾಲೆ.- ಸ್ವಾಮಿ ವಿವೇಕಾನಂದ

ಜಗತ್ತಿನ ಪರಮೋಚ್ಚ ಧರ್ಮವೆಂದರೆ ನಮ್ಮ ಮೂಲಸ್ವರೂಪದಲ್ಲಿ, ಅಂತಃಸ್ಸತ್ವದಲ್ಲಿ ನಂಬಿಕೆಯಿಡುವುದು.- ಸ್ವಾಮಿ ವಿವೇಕಾನಂದ

ಪ್ರತಿಯೊಬ್ಬ ಮಾನವನಲ್ಲೂ ಸುಪ್ತವಾಗಿರುವ ದೈವೀ ಶಕ್ತಿಯನ್ನು ಪ್ರಕಟಗೊಳಿಸಿ, ಪ್ರಕಾಶಿಸುವಂತೆ ಮಾಡುವುದೇ ನಿಜವಾದ ಧರ್ಮ!- ಸ್ವಾಮಿ ವಿವೇಕಾನಂದ

ನುಡಿಮುತ್ತುಗಳು-52

* ವಿದ್ಯೆ ಗುರುಗಳ ಗುರು - ಭ್ರತೃ ಹರಿ.

* ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ಕೀರ್ತಿ ಕೈಗೂಡುತ್ತದೆ - ನುಡಿಮುತ್ತುಗಳು.

* ಶಿಕ್ಷಣವೆಂದರೆ, ಮನಸ್ಸು, ದೇಹ, ಬುದ್ಧಿಗಳೊಂದಿಗೆ ದೊರೆಯುವ ಸಂಸ್ಕಾರ - ಹರ್ಡೀಕರ‍್ ಮಂಜಪ್ಪ.

* ಮನುಷ್ಯನ ವ್ಯಕ್ತಿತ್ವ ಶಿಕ್ಷಣದಿಂದ ಬಯಲಿಗೆ ಬರುತ್ತದೆ - ವಿವೇಕಾನಂದ. 

* ವಿದ್ಯಾಭ್ಯಾಸದಿಂದ ಪ್ರಭುತ್ವ ಬೆಳೆಯದು - ಜಾನ್ ಡ್ಯೂಯಿ.
 

* ಶಿಕ್ಷಣಕ್ಕಿಂತಲೂ ಮನುಷ್ಯರಿಗೆ ಶೀಲ ಚರಿತ್ರೆಗಳು ಹೆಚ್ಚು ಅವಶ್ಯಕ - ಸ್ಪೆನ್ಸರ್.

* ಮನುಷ್ಯನು ಕಲಿಯಲು ಬಯಸುವುದಾದರೆ ಅವನ ಪ್ರತಿಯೊಂದು ತಪ್ಪು ಅವನಿಗೆ ಶಿಕ್ಷಣ ಕೊಡುತ್ತದೆ - ಚಾರ್ಲ್ಸ್ ಡೆಕ್ಕನ್.

* ಅಭಿರುಚಿಯನ್ನು ಹುಟ್ಟಿಸುವುದು ಶಿಕ್ಷಣದ ಉದ್ದೇಶವೇ ಹೊರತು, ಒಬ್ಬರು ಕಲಿತದ್ದನ್ನು ಮತ್ತೊಬ್ಬರಿಗೆ ಹೇಳುವುದಲ್ಲ -  ಗಯಟೆ.

 

* ಶಾಲಾ-ಕಾಲೇಜುಗಳಲ್ಲಿ ಕಲಿತದ್ದು ನಿಜವಾದ ಶಿಕ್ಷಣವಲ್ಲ.  ಅದು ಶಿಕ್ಷಣಕ್ಕೆ ಸಾಧನವಷ್ಟೆ - ಎಮರ್ಸನ್. 
* ಮನುಷ್ಯರಲ್ಲಿ ಪ್ರೇಮವನ್ನು ಮೂಡಿಸುವ ಸರಳ ಜೀವನನ್ನು ಕಲಿಸುವ ವಿದ್ಯೆಯೇ ಶ್ರೇಷ್ಠವಾದದ್ದು - ಟಾಲ್ಸ್ಟಾಯ್.

* ಮನುಷ್ಯನಿಗೆ ಯಾವುದು ಗೊತ್ತಿಲ್ಲವೋ ಅದನ್ನು ತಿಳಿಸುವುದು ವಿದ್ಯಾಭ್ಯಾಸದ ಗುರಿಯಲ್ಲ.  ಹೇಗೆ ವರ್ತಿಸಬೇಕೆಂದು ತಿಳಿಸುವುದೇ ವಿದ್ಯಾಭ್ಯಾಸದ ಗುರಿ - ಜಾನ್ ರಸ್ಕಿನ್.

 

* ಪ್ರತಿಯೊಬ್ಬ ವ್ಯಕ್ತಿಯು ಎರಡು ರೀತಿಯ ಶಿಕ್ಷಣ ಹೊಂದುತ್ತಾನೆ.  ಒಂದು ಇತರರು ಅವನಿಗೆ ನೀಡುವುದು.  ಇನ್ನೊಂದು ಸ್ವಂತ ಅವನು ಕಲಿಯುವುದು - ನುಡಿಮುತ್ತು.

* ವಿದ್ಯೆಯೊಂದಿಗೆ ಆದರ್ಶ ಗುಣಗಳು ನಿನ್ನಲ್ಲಿ ಬರದಿದರೆ ನೀನು ಓದಿದ್ದು ವ್ಯರ್ಥ - ಪ್ರೇಮಚಂದ.

 

* ಮನೆಯೇ ಮೊದಲ ಪಾಠಶಾಲೆ - ಗಾದೆ.

* ವಿದ್ಯಾಭ್ಯಾಸ ಯಾವ ದಿಕ್ಕಿನಲ್ಲಿ ಮನುಷ್ಯನನ್ನು ನಡೆಸುವುದೋ ಅದೇ ಅವನ ಭವಿಷ್ಯವನ್ನು ನಿರ್ಧರಿಸುವುದು - ಪ್ಲೇಟೋ.

* ಶಿಕ್ಷಣವು ಅನುಭವಗಳ ಪೂರ್ವ ವ್ಯವಸ್ಥೆ ವಿಧಾನ - ಜಾನ್ ಡ್ಯೂಯಿ.

 

* ಶಿಕ್ಷಣದ ಮುಖ್ಯ ಕೆಲಸವೆಂದರೆ ನಮ್ಮ ಬದುಕನ್ನು ಅರ್ಥಪೂರ್ಣವಾಗುವಂತೆ ಸಹಕರಿಸುವುದು - ಸ್ಪೆನ್ಸರ್.

ನುಡಿಮುತ್ತುಗಳು-51

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು.

* ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ.

* ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ.

 

* ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್.

* ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ.

 

* ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ.

* ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ.

* ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ.

 

* ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ.

* ಶಿಕ್ಷಣವೇ ಜೀವನದ ಬೆಳಕು - ಗೊರೂರು
 

* ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್.
 

* ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ.

ನುಡಿಮುತ್ತುಗಳು-50

೧.ತಪ್ಪನ್ನು ಮಾಡುವ ಮೊದಲೇ ಆಕ್ಷೇಪಿಸುವುದು ಹಾಗೂ ಒಳ್ಳೆಯದನ್ನು ಮಾಡುವ ಮೊದಲೇ ಹೊಗಳುವುದು ಮಾನವನ ಸಹಜ ಗುಣ!

೨. ಉತ್ತಮ ಗುಣವೆ೦ಬುದು ನೀರಿನ೦ತೆ! ಎಲ್ಲರಿಗೂ ಒಳ್ಳೆಯದನ್ನೇ ಮಾಡುತ್ತದೆ… ಕೆಳ ಮಟ್ಟದಲ್ಲಿಯೇ ನಿಲ್ಲುತ್ತದೆ!

೩. ತನ್ನನ್ನು ತಾನೇ ಹೊಗಳಿಕೊಳ್ಳುವವನು ಮಹಾ ಮೂರ್ಖನು!

೪. ಒಳ್ಳೆಯ ನೆಲದಲ್ಲಿ ಬಿತ್ತಿದ ಬೀಜ, ಒಳ್ಳೆಯ ಮಗನಲ್ಲಿ ಇಟ್ಟಿದ್ದು ಹಾಗೂ ಕೊಟ್ಟಿದ್ದು ಎ೦ದೂ ಹಾಳಾಗುವುದಿಲ್ಲ- ಪರಾಶರ ಸ್ಮೃತಿ

೫. ರಾಜಕೀಯವನ್ನು ಹಾಗೂ ನೀತಿಯನ್ನು ಎರದೂ ಬೇರೆ ಬೇರೆ ಎ೦ದು ಎಣಿಸಿದವರು ಎರಡನ್ನೂ ತಿಳಿದುಕೊಳ್ಳಲಾರರು- ಜಿ.ವಿ. ಮಾರ್ಲೆ

೬. ಜೀವನವೆಲ್ಲಾ ಬೇವು-ಬೆಲ್ಲ, ಸವಿದವನೇ ಕವಿ ಮಲ್ಲ!- ಕುವೆ೦ಪು

೭. ಯುಧ್ಧದ ಚರಿತ್ರೆಯನ್ನು ಓದುವುದರಲ್ಲಿ ಇರುವಷ್ಟು ಆಸಕ್ತಿ ಶಾ೦ತಿಯ ಇತಿಹಾಸವನ್ನು ಓದುವುದರಲ್ಲಿ ಇರುವುದಿಲ್ಲ!

೮. ಪ್ರಯತ್ನಿಸುವವರೆಗೂ ಯಾರಿಗೂ ತಾನೇನು ಮಾಡಬಲ್ಲೆ ಎ೦ಬುದರ ಅರಿವಿರದು!

೯. ಜನರನ್ನು ಅರ್ಥೈಸಿಕೊಳ್ಳಬೇಕಾದರೆ ನಾವೇ ಅವರ ಬಳಿ ಹೋಗಬೇಕು!

೧೦. ನಾಚಿಕೆ ಮತ್ತು ಭಯವಿಲ್ಲದೆ ಮನುಷ್ಯನ  ಅ೦ತರ೦ಗದಲ್ಲಿ ಕೆಟ್ಟ, ಒಳ್ಳೆಯ, ಸ೦ತೋಷದ ಹಾಗೂ ದು:ಖದ ಎಲ್ಲಾ ರೀತಿಯ ಯೋಚನೆಗಳೂ ಬರುತ್ತವೆ!

೧೧. ನಾನು ಬೇರೆ- ದೇಹ ಬೇರೆ ಎ೦ದು ತಿಳಿವು ತ೦ದುಕೊ೦ಡರೆ ರೋಗದ ಭಾಧೆಯು ಅತ್ಯಲ್ಪವಾಗುತ್ತದೆ- ಎಮ್.ವಿ.ಸೀತಾರಾಮಯ್ಯ

೧೨. ಯಾವುಧೇ ಧನ ರಾಶಿಯೂ ಸ೦ತೋಷ ಎ೦ಬ ಧನರಾಶಿಯ ಮು೦ದೆ ಧೂಳಿನ ಸ್ಥಾನ- ಸ೦ತ ಕಬೀರರು

೧೩.ಏಕಾ೦ಗಿತನವನ್ನೇ ಮೊದಲಿನಿ೦ದಲೂ ಅಪ್ಪಿಕೊ೦ಡಲ್ಲಿ ಎಷ್ಟೋ ಮಧುರ ಕ್ಷಣಗಳಿ೦ದ, ಜೀವನಾನುಭವಗಳಿ೦ದ ವ೦ಚಿತರಾಗುತ್ತೇವೆ!

೧೪. ಎಲ್ಲವನ್ನೂ ಧೇವರೇ ನೋಡಿಕೊಳ್ಳುತ್ತಾನೆ೦ದು ಸುಮ್ಮನೇ ಕುಳಿತುಕೊಳ್ಳುವುದು ಮಹಾ ಮೂರ್ಖತನ!


೧೫. ನಾಸ್ತಿಕರಿಗಿ೦ತಲೂ ತಮ್ಮ ತಪ್ಪುಗಳಿಗೆ ದೇವರನ್ನು ಗುರಿಯನ್ನಾಗಿಸುವವರು ಅತ್ಯಲ್ಪರು!

ನುಡಿಮುತ್ತುಗಳು-49

"ಸಾಧನೆಗೆ ಗುರಿಗಿಂತ ಛಲವೇ ಮುಖ್ಯ"

"ಪ್ರತಿಫಲದ ಅಪೇಕ್ಷೆಯಿಲ್ಲದೆ ಮಾಡಿದ ಸಹಾಯ ಎಂದಿಗೂ ದೊಡ್ಡದು."


"ಜೀವನದಲ್ಲಿ ನೀನೊಬ್ಬನೇ ಏನಾದರೂ ಸಾಧಿಸಿ ಮೇಲೆ ಬರುವುದಕ್ಕಿಂತ ಹತ್ತು ಜನರನ್ನ ಮೇಲೆ ತಂದರೆ ಅದಕ್ಕಿಂತ ದೊಡ್ಡ ಸಾಧನೆ ಬೇರೊಂದಿಲ್ಲ."

"ಜೀವನದಲ್ಲಿ ಎಂದೂ ಯಾರಿಂದಲೂ ಸಹಾಯದ ಅಪೇಕ್ಷೆಯನ್ನ ಇಡಬಾರದು. ಯಾಕೆಂದರೆ ನಾವು ಕಷ್ಟದಲ್ಲಿ ಇದ್ದಾಗ ಯಾರಾದರೂ ಸಹಾಯ ಮಾಡದಿದ್ದರೆ ಅದಕ್ಕಿಂತ ದೊಡ್ಡ ಯಾತನೆ ಬೇರೊಂದಿಲ್ಲ."


"ದೇವರಲ್ಲಿ ಎಂದಿಗೂ ಕೇವಲ ಸ್ವಂತದ ಏಳಿಗೆಯಾಗಲಿ ಅಂತ ಬೇಡಿಕೊಳ್ಳದೆ ಹತ್ತು ಜನರ ಏಳಿಗೆಯಾಗಲಿ ಅಂತ ಬೇಡಿಕೊಳ್ಳಿ. ದೇವರ ಕೊಡುವ ವರಕ್ಕಿಂತ ಆ ಹತ್ತು ಜನರನ್ನ ಉದ್ಧಾರ ಮಾಡಿದ ಪುಣ್ಯ ಎಷ್ಟೋ ದೊಡ್ಡದು"


"ಮನುಷ್ಯನಿಗೆ ಯಾವಾಗ ಒಂದು ವಸ್ತು ಸುಲಭವಾಗಿ ಸಿಗುವ ಹಾಗೆ ಇರುತ್ತೋ ಆಗ ಅದರ ಬೆಲೆ ಗೊತ್ತಿರುವುದಿಲ್ಲ, ಆದರೆ ಯಾವಾಗ ಆ ವಸ್ತುವಿನ ಬೆಲೆ ತಿಳಿಯುತ್ತದೋ ಆಗ ಅದು ಸುಲಭವಾಗಿ ಸಿಗುವುದಿಲ್ಲ."

ನುಡಿಮುತ್ತುಗಳು-48


ಮಹಾಕಾರ್ಯಗಳನ್ನು ಮಹಾತ್ಯಾಗದಿಂದ ಮಾತ್ರ ಸಾಧಿಸಲು ಸಾಧ್ಯ. ಅನ್ಯಾಯದ ಸ್ಥಾನವು ಅಭದ್ರವಾದುದು. ಅದರಿಂದ ಏಳಿಗೆ ಆಗದು.-ಸ್ವಾಮಿ ವಿವೇಕಾನಂದ.

ಏಳು ಎದ್ದೇಳು ನಿನಗಾಗಿ ಕಾಯುತ್ತಿದೆ ಒಂದು ಸುಂದರ ದಿನ .
ಒಳ್ಳೆಯ ಗುರಿಯತ್ತ ನಡೆ .ನಿರ್ಧಿಷ್ಟತೆಯ ಜೊತೆ ಓಡು ಸಾಧನೆಗಳ ಜೊತೆ ಹಾರಾಡು
ನಿನಗಾಗಿ ಕಾಯುತ್ತಿರುವ ಸುಂದರ ಬದುಕಿದೆ ಏಳು ಎದ್ದೇಳು
- ಸ್ವಾಮಿ ವಿವೇಕಾನಂದ


ಸಾವಿರಾರು ಜನರನ್ನು ಗೆಲ್ಲುವವನು ವೀರನಲ್ಲ, ಮನಸ್ಸನ್ನು ಗೆಲ್ಲುವವನು ವೀರ-ಗೌತಮ ಬುದ್ದ

ಕಾಲ ಕೆಟ್ಟಿತೆಂದು ಜನರು ಹೇಳುತ್ತಾರೆ. ಆದರೆ ಕಾಲ ಕೆಡುವುದಿಲ್ಲ, ಕೆಡುವುದು ಜನರ ನಡತೆ ಮತ್ತು ಆಚಾರ - ವಿಚಾರ ಮಾತ್ರ. --ಸ್ವಾಮಿ ವಿವೇಕಾನಂದ

ನಿಮ್ಮ ಮನಸ್ಸು ಪರಿಶುದ್ಧವಾಗಿದ್ದರೆ ಸಂತೋಷ ನೆರಳಿನಂತೆ ನಿಮ್ಮನ್ನು ಹಿಂಬಾಲಿಸಲಿದೆ-ಭಗವಾನ್ ಬುದ್ಧ

ಶಾಂತಿ ನಮ್ಮೊಳಗಿನಿಂದ ಬರುವಂತಹದ್ದು. ಅದನ್ನು ಹೊರಗಿನಿಂದ ನಿರೀಕ್ಷಿಸಬೇಡಿ.- ಭಗವಾನ್ ಬುದ್ಧ 


ಯಾರು ಅಸಂತುಷ್ಟಿಯಿಂದ ಮುಕ್ತರಾಗುತ್ತಾರೋ ಅವರಿಗೆ ಜೀವನದಲ್ಲಿ ಶಾಂತಿ, ನೆಮ್ಮದಿ ದೊರೆಯಲಿದೆ. –ಭಗವಾನ್ ಬುದ್ದ, 

ನವೆಂಬರ್ 23, 2012

ನುಡಿಮುತ್ತುಗಳು-47

ದುಷ್ಟರಿಂದಲೂ ದೂರ ಇರಬೇಕು!
ಕೆಲವೊಂದು ಸಲ ನಾವು ಪ್ರೀತಿಸಿದವರು ನಿರಕಾರಿಸಿದ ಮೇಲೆ ಅವರಿಂದಲೂ
ದೂರ ಇರಬೇಕು
ಮೊದಲಿಗಿಂದ ಎರಡನೆಯದು ತುಂಬಾ ಒಳ್ಳೆಯದು!
ಆಯಾ ಪ್ರಾಣಿಗಳು ಅವುಗಳ ತರಾನೇ ನಡೆದುಕೊಂಡರೆ ಮನುಷ್ಯ ಮಾತ್ರ ಎಲ್ಲಾ ಪ್ರಾಣಿಗಳಾಗೆ ವರ್ತನೆ ಮಾಡ್ತಾನೆ!

ಕಾರಣವಿರಲಿ,
ಕಾರಣವಿಲ್ಲದೆ ಇರಲಿ,
ನಗಿ, ಆಗ ನಿಮ್ಮನ್ನು ನೋಡಿ
ಇತರರೂ ನಗುತ್ತಾರೆ.
- ಟಿ.ಪಿ.ಕೈಲಾಸಂ


ಪ್ರಣತೆಯೊಂದು ತಾ ಉರಿದುರಿದು
ತನ್ನನೆ ತಾ ಸುಟ್ಟು ಕೊಂಡು ಬೆಳಕ ಬೀರ್ವ
ನಿಸ್ವಾರ್ಥತಮ ಜ್ಯೋತಿ ತತ್ವ ಮನದ ಅಂಧಕಾರವ ನೀಗಿ
ಅಲ್ಲಿರುವ ಸ್ನೇಹ ಪ್ಪ್ರೀತಿಗಳ ಕಾಣಿಸಲಿ
ದೀಪದಿಂದ ದೀಪ ಬೆಳಗಲಿ
ಮಾನವತ್ವದ ಕೊಂಡಿ ಬೆಸೆಯಲಿ

ನವೆಂಬರ್ 22, 2012

ನುಡಿಮುತ್ತುಗಳು-46

ನಂಬಿ ಅಥವಾ ಬಿಡಿ ಈ ಭೂಮಿ ಎಲ್ಲರಿಗು ವಾಸಿಸಲು ಸಾಕಾಗುವಷ್ಟು
ನೆಲವನ್ನು ಒದಗಿಸಿದೆ. ಆದರೆ ಮನುಷ್ಯ ಮನುಷ್ಯನನ್ನೇ ನಿರಾಶ್ರಿತ
ಸ್ಥಿತಿಗೆ ತಳ್ಳುತಿದ್ದಾನೆ
" ಸ್ವಾಮಿ ವಿವೇಕಾನಂದ"


ನೀವು ಮಾಡುವ ಕರ್ಮ (ಕೆಲಸ) ಮುಖ್ಯವಾಗಿಲ್ಲದೇ ಇರಬಹುದು, ಆದರೆ ಕರ್ಮ ಮಾಡುವುದು ಅತ್ಯಂತ ಅಗತ್ಯ. –ಮಹಾತ್ಮ ಗಾಂಧಿ
 

ಮೊದಲು ಕನಸಿರಬೇಕು, ಅದೊಂದಿದ್ದರೆ ಎಲ್ಲವೂ ಸಾಧ್ಯವಾಗುವುದು. –ಉಪನಿಷತ್ತುಗಳು

ನುಡಿಮುತ್ತುಗಳು-45










ನುಡಿಮುತ್ತುಗಳು-44







ನುಡಿಮುತ್ತುಗಳು-43


ಜಗತ್ತು ಎಷ್ಟು ವಿಚಿತ್ರ ನೋಡಿ. 
ಬಡವ ದೇವಾಲಯದ ಹೊರಗೆ ಬೇಡುತ್ತಾನೆ, ಅದೇ ಶ್ರೀಮಂತ ಒಳಗೆ ಬೇಡುತ್ತಾನೆ.



ನುಡಿಮುತ್ತುಗಳು-42

ಪ್ರೇಮಕಿಂತ ತ್ಯಾಗ ದೊಡ್ಡದು ರೂಪಕಿಂತ ಗುಣ ದೊಡ್ಡದು ಹಣಕಿಂತ ಮಾನವೀಯತೆ ದೊಡ್ಡದು ಎಲ್ಲಕಿಂತ ನಿಮ್ಮ ಸ್ನೇಹ ಮತ್ತು ಪ್ರೀತಿ ದೊಡ್ಡದು




ಮಾ.ಕೃ.ಮಂಜು


ನುಡಿಮುತ್ತುಗಳು-41

ಸತ್ಯ ಮತ್ತು ನ್ಯಾಯವನ್ನು ಸಮರ್ಥನೆ ಮಾಡಿಕೊಳ್ಳುವುದು ಮನುಷ್ಯನ ಸಭ್ಯತೆ ಹಾಗೂ ಸಜ್ಜನಿಕೆಯ ಒಂದು ಅಂಗ.

ಸಮುದ್ರದಲ್ಲಿ ಸುರಿದ ಮಳೆ, ಹಸಿವಿಲ್ಲದವನಿಗೆ ನೀಡಿದ ಭೋಜನ, ಧನವಂತನಿಗೆ ಕೊಟ್ಟ ದಾನ, ದರಿದ್ರನಿಗೆ ಬಂದ ಯೌವನ ಇವೆಲ್ಲ ವ್ಯರ್ಥವೇ ಸರಿ

ಕೈ ಮೇಲಿನ ಗೆರೆಗಳು ನಿನ್ನ ಭವಿಷ್ಯ ರೂಪಿಸುತ್ತವೆ ಎಂದು ನಂಬದಿರು, ಗೆರೆಗಲೇನು ಬಂತು,
ಕೈ ಗಳೇ ಇಲ್ಲದವರಿಗೂ ಉತ್ತಮ ಭವಿಷ್ಯ ಇರುತ್ತದೆ
ಎಂಬುದನ್ನು ಮರೆಯದಿರು.
ನಿನ್ನ ಬಗ್ಗೆ ನಿನಗೆ ವಿಶ್ವಾಸವಿರಲಿ


ಕೆಲವೇ ಪ್ರೀತಿಸೋ ಹೃದಯಗಳು ಮಾತ್ರ ನಮ್ಮ ನಗೆಯಲ್ಲಿರೋ ಸಣ್ಣ ಸುಳ್ಳುಗಳನ್ನು, ಕಣ್ಣಿರಿನಲ್ಲಿರೋ ಸತ್ಯನ್ನ ಗುರುತಿಸುತ್ತಾರೆ ಎಂದಿಗೂ ಅವರನ್ನು ಕಳೆದುಕೊಳ್ಳಬಾರದು.

ನೆನಪಿರಲಿ
ಹಣ ಇದ್ರೆ ಸತ್ತ ಪ್ರೇಯಸಿಗೆ ತಾಜ್ ಮಹಲ್ ಬೇಕಾದರೂ ಕಟ್ಟಬಹುದು
ಹಣ ಇಲ್ಲ ಅಂದರೆ ಬದುಕಿರೋ ಪ್ರೇಯಸಿಗೆ ತಾಳಿನೂ ಕಟ್ಟಕ್ಕೆ ಆಗಲ್ಲ!!..ಸರೀನಾ... ತಪ್ಪ ..?

ಕಡಲಲ್ಲಿ ಸಾವಿರ ಮುತ್ತುಗಳು ಸಿಗಬಹುದು ಆದರೆ ಜೀವನದಲ್ಲಿ ಸಿಗುವುದು ಎರಡೆ ಮುತ್ತುಗಳು ಅದುವೆ ಪ್ರೀತಿ ಮತ್ತು ಸ್ನೇಹ ಇದರಲ್ಲಿ ಯಾವುದನ್ನೆ ಕಳಕೊಂಡರು ಮನಸಿಗೆ ನೊವಾಗುತ್ತೆ ಅಲ್ವ

ನುಡಿಮುತ್ತುಗಳು-40

ಉತ್ತಮ ಗುರೂ ತನ್ನ ಶಿಷ್ಯರಿಂದಲೇ ಕಂಡು ಹಿಡಿಯಲ್ಪಡುತ್ತಾನೆ. ಯಾವ ಶಿಷ್ಯ ಗುರುವಿಗಿಂತ ಮುಂದೆ ಹೋಗುತ್ತಾನೋ ಅವನೇ ಉತ್ತಮ ಗುರು.
— ವಿನೋಬಾ ಭಾವೆ

ಹಸಿವು ಒಂದು ರೋಗ ಎಂದು ತಿಳಿದುಕೋ. ಭಿಕ್ಷೆ ದೊರಕಿದುದನ್ನು ಔಷಢ ಎಂದು ಸೇವಿಸು. ಸಿಹಿಯನ್ನು ಬೇಡದಿರು. ದೊರೆತುದುದನ್ನು ಸೇವಿಸು. ರೋಗಕ್ಕೆ ಎಷ್ಟು ಪ್ರಮಾಣದ ಔಷಧ ಬೇಕೋ ಅಷ್ಟೇ ಆಹಾರ ಸೇವಿಸು. ಹೆಚ್ಚಲ್ಲ ಕಡಿಮೆಯಲ್ಲ.
— ಶಂಕರಾಚಾರ್ಯರು

 

"ನಾನು ಅವಧೂತನಾಗಿ ಹೋಗುವುದಿಲ್ಲ. ಕನ್ನಡವು ತನ್ನ ಸ್ಥಾನವನ್ನು ಅಧಿಕೃತವಾಗಿ ಪಡೆಯುವತನಕ, ನನ್ನ ಪ್ರಾಣವಿರುವತನಕ, ಕನ್ನಡಕ್ಕಾಗಿ ದುಡಿಯುವುದು, ಕನ್ನಡಕ್ಕಾಗಿ ವ್ಯಕ್ತಿಗಳನ್ನು ದುಡಿಯಲು ಪ್ರಚೋದಿಸುವುದು, ಅದಕ್ಕಾಗಿ ಭಗವಂತನಲ್ಲಿ ಮೊರೆಯಿಡುವುದು ಮಾಡುತ್ತೇನೆ. ನನ್ನೆಲ್ಲ ತಪಃಶಕ್ತಿಯನ್ನು ಅಥವಾ ಪ್ರಾರ್ಥನಾ ಶಕ್ತಿಯನ್ನು ಕನ್ನಡದ ಸೇವೆಗಾಗಿ ಮೀಸಲಿಡುತ್ತೇನೆ.... "
— ಕುವೆಂಪು ('ಕನ್ನಡ ದೀಕ್ಷೆ)


ಯಾರ ಯೋಗ್ಯತೆಯನ್ನು ಅವರ ಲೋಪಗಳ ಆಧಾರದ ಮೇಲೆ ನಿರ್ಣಯಿಸಬಾರದು.
ಕೈನಿಂದ ಕೆಲಸವಾಗಲಿ ಮತ್ತು ಹೃದಯದಲ್ಲಿ ಭಕ್ತಿ ಇರಲಿ
— ವಿನೋಬಾ ಭಾವೆ


ಭಕ್ತಿಯ ಉಗಮ ಭೀತಿಯಿಂದಲ್ಲ ಪ್ರೀತಿಯಿಂದ ಆಯಿತು. ಮನುಷ್ಯನಿಗೆ ಭೀತಿ ಎಷ್ಟು ಸ್ವಾಭಾವಿಕವೋ, ಪ್ರೀತಿ ಅದಕ್ಕಿಂತ ಹೆಚ್ಚು ಸ್ವಾಭಾವಿಕ. ಮನುಷ್ಯನಿಗೆ ಭೀತಿಗಿಂತ ಮೊದಲು ಪ್ರೀತಿಯ ಅನುಭವವಾಗುತ್ತದೆ.
— ವಿನೋಬಾ ಭಾವೆ


ಕೊನೆಯಲ್ಲಿ ನಮ್ಮ ನೆನಪಿಗುಳಿಯುವುದು ನಮ್ಮ ಶತ್ರುಗಳ ಮಾತಲ್ಲ, ನಮ್ಮ ಮಿತ್ರರ ಮೌನ.
— ಮಾರ್ಟಿನ್ ಲೂಥರ್ ಕಿಂಗ್ ಜ್ಯೂನಿಯರ್


ನಿನ್ನ ದೊಡ್ಡ ನೆರಳನ್ನು ನೋಡಿ ಹೆದರುವ ಅಥವಾ ಭಯ ಪಡುವ ಕಾರಣವಿಲ್ಲ. ಅದು ನಿನ್ನ ಗುಲಾಮ. ನಿನ್ನ ಆಜ್ಞೆಯಂತೆ ನಡೆಯುತ್ತದೆ. ನೀನು ನಿಂತರೆ ಅದೂ ನಿಲ್ಲುವುದು, ನೀನು ಕುಳಿತರೆ ಅದೂ ಕುಳಿತುಕೊಳ್ಳುವುದು.
— ವಿನೋಬಾ ಭಾವೆ

ನುಡಿಮುತ್ತುಗಳು-39


“ಜಟೆಯಿಂದಾಗಲೀ, ಗೋತ್ರದಿಂದಾಗಲೀ, ಹುಟ್ಟಿನಿಂದಾಗಲೀ ಯಾರೂ ಬ್ರಾಹ್ಮಣರಾಗುವುದಿಲ್ಲ, ಇದು ಶುದ್ದ ಸುಳ್ಳು, ಕೇವಲ ಧರ್ಮಗ್ರಂಥಗಳಲ್ಲಿ ಬರೆದಿದೆ ಎಂದ ಮಾತ್ರಕ್ಕೆ ತಲಾಂತರಗಳಿಂದ, ನಿಮ್ಮ ಹಿರಿಯರಿಂದ ನಡೆದುಕೊಂಡು ಬಂದ ಪದ್ಧತಿ ಎಂದ ಮಾತ್ರಕ್ಕೆ ಅವುಗಳನ್ನು ಒಪ್ಪಿಕೊಳ್ಳಲೇ ಬೇಡಿ, ಯಾವುದನ್ನೂ ಪ್ರಶ್ನಿಸದೆ ಒಪ್ಪಿಕೊಳ್ಳಬೇಡಿ.” –ಬುದ್ಧ
“ಯಾರು ಬಹಳ ನಮ್ರರಾಗಿ ಕೆಳಕೆಳಗೆ ಇಳಿದರೋ ಅವರೆಲ್ಲ ಪಾರಾದರು, ಉಚ್ಚಕುಲೀನರಾಗಿದ್ದು ಅಭಿಮಾನದ ದೋಣಿ ಹತ್ತಿದರೋ ಅವರು ಮುಳುಗಿದರು.” –ಕಬೀರ
“ಆಧುನಿಕ ಹಾಗೂ ಮಾನವೀಯ ಮೌಲ್ಯಗಳಿಗೆ ಹಿಂದೂ ಧರ್ಮದ ಅಂತರಂಗದಲ್ಲಿ ಸ್ಥಳವೇ ಇಲ್ಲ.ಈ ಹಿಂದೂ ಧರ್ಮ ಸಹೋದರತೆ ಹಾಗೂ ಸಮಾನತೆಯನ್ನು ಸದಾ ಹತ್ತಿಕ್ಕುತ್ತುರುತ್ತದೆ. ಅಸ್ಪೃಶ್ಯತೆ ಹಾಗೂ ಜಾತಿ ಪದ್ಧತಿಗಳನ್ನು ತೆಗೆದರೆ ಈ ಹಿಂದೂ ಧರ್ಮದಲ್ಲಿ ಇನ್ನೇನು ಉಳಿಯುವುದಿಲ್ಲ.” –ಅಂಬೇಡ್ಕರ್
“ಅಸ್ಪೃಶ್ಯತೆ ಹಿಂದೂ ಧರ್ಮದ ಭಾಗವೆಂದು ಯಾರಾದರೂ ಸಾಬೀತು ಮಾಡಿದರೆ ಅಂದೇ ಆ ಧರ್ಮ ನನಗೆ ಬೇಕಿಲ್ಲವೆಂದು ಸಾರುವೆ.” –ಮಹಾತ್ಮ ಗಾಂಧಿ
“ಭಾರತೀಯತೆಯ ಹೆಸರಿನಲ್ಲಿ ಎಲ್ಲ ಜಾತಿ-ಮತ ಇತ್ಯಾದಿಗಳನ್ನು ಉಳಿಸಿಕೊಳ್ಳೋದಾದರೆ, ನನಗೆ ಆ ಭಾರತೀಯತೇನೇ ಬೇಡ. ನನಗೆ ಭಾರತೀಯನಾಗೋದಂದ್ರೆ ವಿಶ್ವ ಮಾನವನಾಗೋದು.”  –ಕುವೆಂಪು
“ಗಾಂಧೀಜಿಯವರು ಆಸ್ತಿಕರಾಗಿಲ್ಲದಿದ್ದರೆ ಮೇಲ್ಜಾತಿಯವರು ಹಾಗೂ ಭಾರತದ ಸಂಘಪರಿವಾರ ಬಾಪೂ ಅವರನ್ನು ಸೈದ್ಧಾಂತಿಕವಾಗಿ ಎಂದೋ  ಮುಗಿಸಿಬಿಡುತ್ತಿದ್ದರು.” –ಅಸ್ಗರ್ ಅಲಿ ಇಂಜಿನಿಯರ್

ನುಡಿಮುತ್ತುಗಳು-38


* ಮಳೆಗೂ  ಮುನ್ನ ಕೆಲವೊಮ್ಮೆ ಮಾತ್ರ, ಆಗಸದಲ್ಲಿ ಕಾಮನಬಿಲ್ಲು ಮೂಡಿಬರುತ್ತದೆ.ಸಂತೋಷವೂ ಹಾಗೆಯೇ, ಜೀವನದಲ್ಲಿ ಆಗಾಗ ಬಂದು, ಕಷ್ಟಗಳು ಶಾಶ್ವತವಲ್ಲವೆಂದು ನೆನಪಿಸುತ್ತದೆ.

*ಹಿಂದಿನ ಬಗ್ಗೆ ಯೋಚಿಸಿದರೆ ದುಃಖವಾದೀತು. ಮುಂದಿನ ಬಗ್ಗೆ ಚಿಂತಿಸಿದರೆ ಭಯ ವಾಗಬಹುದು. ಆದ್ದರಿಂದ ಇಂದಿನ ಬಗ್ಗೆ ಯೋಚಿಸೋಣ, ಇದರಿಂದ ನೆಮ್ಮದಿ,ಸಂತಸ ದೊರೆತೀತು.
* ಸುಂದರವಾದ ವಸ್ತುಗಳು ಉತ್ತಮವಾಗಿರಲೇ ಬೇಕೆಂದಿಲ್ಲ. ಆದರೆ ಉತ್ತಮ ವಸ್ತುಗಳು ಸದಾ ಸುಂದರವಾಗಿರುತ್ತದೆ. ಸುಂದರವಾದ ಮುಖಕ್ಕಿಂತ, ಸುಂದರ ಹೃದಯವಂತರನ್ನು ಶೋದಿಸಬೇಕು.

* ಪುಸ್ತಕಗಳ್ಳನ್ನು ಓದುವುದರ ಮೂಲಕ, ಜಗತ್ತನ್ನು ಅತ್ಯಂತ ಸುಲಭ ವೆಚ್ಚದಲ್ಲಿ ನೋಡಬಹುದು.


 * ಏಷ್ಟೇ ಅಡೆ- ತಡೆಗಳು ಎದುರಾದರು ಸೂರ್ಯ ಉದಯಿಸದೇ ಇರದು. ಅದೇ ರೀತಿ, ಜೀವನದಲ್ಲಿ ಗುರಿ ಸಾಧನೆಗೆ ಅಡ್ಡಿ- ಆತಂಕಗಳು ಎದುರಾಗುವುದು ಸಹಜ.ಅದಕ್ಕೆ, ಅಂಜಬಾರದು.
* ಇತರರು  ನಮಗೆ ಏನು ಮಾಡಬೇಕೆಂದು ಅಪೇಕ್ಷಿಸುತ್ತೆವೆಯೋ, ಅಂಥಹವುದನ್ನು ನಾವೂ ಇತರರಿಗೆ ಮಾಡಬೇಕು.
*ಸಂಪತ್ತನ್ನು ಲಕ್ಷಸದವ್ರು ಹಲವರು ಇರಬಹುದು, ಆದರೆ ಸಂಪತ್ತನ್ನು ದಾನ ಮಾಡಬಲ್ಲ ಸಾಮಾರ್ತ್ಯಉಳ್ಳವರು  ಇರುವುದು ಕೆಲವೇ ಮಂದಿ ಮಾತ್ರ.

ನುಡಿಮುತ್ತುಗಳು-37


*  ಅಸೂಯೆ ಹೆಡೆ ಎತ್ತಿದಾಗ ನಮ್ಮ ಪ್ರೀತಿ ಪಾತ್ರರೂ ಕೂಡ ನಮ್ಮ ವೈರಿಗಳಗುತ್ತಾರೆ,     ಆದ್ದರಿಂದ ಮತ್ಸರಕ್ಕೆ ಅವಕಾಶ ಕೊಡಕೂಡದು.

*  ಮಾತಾಡಿ  ಕೆಟ್ಟವರು ಅನ್ನಿಸಿ ಕೊಳ್ಳದಕಿಂತ, ಮೌನವಾಗಿದ್ದು ಅರ್ಥವಾಗದೇ
    ಉಳಿದುಬೀಡೋದು ಒಳ್ಳೆಯದು.

*  ಸುಡು ಬೇಸಿಗೆ ಇದ್ದರೂ, ಮಳೆಯ ಆಗಮನ ನೀರಿಕ್ಷಿಸುವ   ನವಿಲಿನಂತೆ,ಜೀವನದಲ್ಲಿ ತೊಂದರೆಗಳ ಬಳಿಕ ನೆಮ್ಮದಿ ದಿನಗಳು   ಬರದೇಇರವು.....

*   ನಾವು  ಯಾರನ್ನಾದರೂ ಸಂಪೂರ್ಣ ವಾಗಿ ನಂಬಿದರೆ ಎರಡು ಸಾದ್ಯತೆಗಳಿರುತ್ತವೆ. ಒಂದು,ಜೀವಮಾನದಲ್ಲಿ ಮರೆಯಲಾಗದಂತ ಗೆಳೆಯ ಸಿಕ್ಕಾನು, ಇಲ್ಲವೇ ಮರೆಯಲಾಗದಂತ ಪಾಠ ಕಲಸಿಯಾನು. ನಂಬುವ ಮುನ್ನ ತುಸು ಯೋಚನೆ ಮಾಡಬೇಕು.

*   ಇನ್ನೊಬ್ಬರೊಂದಿಗೆ ಹೋಲಿಕೆ ಮಾಡಿಕೊಳ್ಳುವುದು ಒಳ್ಳೆಯದಲ್ಲ,ಅದರಿಂದ ನಾವು ಪ್ರತಿಷ್ಠೆ ಯಾ ಮತ್ಸರ ಈ ಎರಡರಲ್ಲಿ ಯಾವುದಾದ ಒಂದರ ಭಾದೆಗೆ ಒಳಗಾಗುತೇವೆ.
*ಸಹನೆ ಇಂದ ಇರುವುದು ಕಠಿಣ; ಆದರೆ, ಅದು ನೀಡುವ ಅಂತ್ಯ ಫಲ ಶಾಂತಿ ಹಾಗು ಸಮಾದಾನ.
*ಯಾವುದಾದರು ಕಾರ್ಯದಲ್ಲಿ ತೊಡಗಿಕೊಳ್ಳುವ ಮೂಲಕ ನಾವು ಸದಾ ಚಟುವಟಿಕೆಯಿಂದ ಇರಬೇಕು. ಕ್ರಿಯಾಶೀಲ ವ್ಯಕ್ತಿಗೆ ದುಃಖ ,ಚಿಂತೆಗೆ ಸಮಯ ಇರದು.

*ನಮ್ಮ ಸ್ಮರಣ ಶಕ್ತಿ ತುಂಬಾ ದುರ್ಬಲ ಎಂದೇ ಸಾಮಾನ್ಯವಾಗಿ ಎಲ್ಲರೂ ಭಾವಿಸುತ್ತೇವೆ.ಆದರೆ ಕೆಲವರನ್ನು ಮರೆಯಲು ಎಷ್ಟೇ  ಯತ್ನಿಸಿದರೂ ಅದು ಸಾಧ್ಯವಾಗದಿರುವಾಗ ನಮ್ಮ ನೆನಪಿನ ಶಕ್ತಿ ಎಷ್ಟು ಚೆನ್ನಾಗಿದೆ ಎಂಬುದರ ಅರಿವಾಗುತ್ತದೆ.
* ಸೋತು ಹೋಗುತ್ತೇನೆಂಬ  ಬಯವನ್ನು ಗೆಲ್ಲುವುದೇ  ನಿಜವಾದ  ಜಯ.
* ಬೇರೆಯವರ ದೋಷ ಹುಡಕುತ್ತಾ ಹೊರಟಂತೆ ನಾವೂ ಅದರ ಬಾಧೆಗೆ ಒಳಗಾಗುತ್ತೇವೆ ದೌರ್ಬಲ್ಯಗಳು ಸೊಂಕಿದ್ದಂತೆ, ಬಲು ಬೇಗ ಅಂಟುತ್ತವೆ. 
 *ನಮ್ಮನ್ನು ಧ್ವೇಷಿಸುವ ಜನರನ್ನು ಧ್ವೇಷಿಸುವುದಕ್ಕೆ  ನಮ್ಮ  ಸಮಯವನ್ನು 
    ವ್ಯರ್ಥ  ಮಾಡಬಾರದು.

* ವಿಧ  ವಿಧದ ಹೂಗಳ ಮಕರಂದದಿಂದ ಜೇನು ಶೆಕರಣೆಯಾಗುವಂತೆ, ಎಲ್ಲರೂ        ಒಟ್ಟಿಗೆ ದುಡಿದಾಗ ಮಾತ್ರ ಅದರ ಫಲಿತಾಂಶ ಸಿಹಿಯಾಗಿರಲು ಸಾಧ್ಯ. 

* ನಮ್ಮೊಂದಿಗೆ  ಜಗಳ ಮಾಡಲು ಹಲವರು ತುದಿಗಾಲ ಮೇಲೆ ನಿಂತಿರುತ್ತಾರೆ, ನಗು ಹಾಗು ಪ್ರೀತಿಯ ಮನೋಭಾವ ನಮ್ಮದಾಗಿರಬೇಕು.


* ನಾವು ಸರಿಯಾಗಿದ್ದರೆ ಕೋಪಗೊಳ್ಳುವ ಅಗತ್ಯವಿಲ್ಲ. ನಾವು ಸರಿಯಾಗಿ ಇಲ್ಲದ್ದಿದ್ದರೆ ಕೋಪಿಸಿ ಕೊಳ್ಳುವ ಹಕ್ಕು ನಮಗಿಲ್ಲ.ಅಂತೂ ಕೋಪ ಸರಿಯಲ್ಲ ಎಂಬುವುದೇ ಇದರ ತಾತ್ಪರ್ಯ.

ನುಡಿಮುತ್ತುಗಳು-36


ಉತ್ತಮ ಫಲ
ಸನ್ಮಾರ್ಗದತ್ತ ನಡೆಯಲು ಸ್ವಾಮಿಗಳಿಂದ ಭೋಧನೆ
ತಪ್ಪಿ ನಡೆದರೆ ನಮಗಾಗುವದು ವೇದನೆ
ಉಪದೇಶದ ಮಾತುಗಳಲ್ಲಿ ಒಂದನ್ನಾದರೂ ಪಾಲಿಸಬೇಕು
ಕೆಲ ದಿನಗಳ ನಂತರ ಉತ್ತಮ ಫಲ ಕಾಣಬೇಕು

ಸಂಪತ್ತು
ಗಳಿಕೆ ಪ್ರವೃತ್ತಿಯಿದ್ದರೂ ನಿಯಮ ಮಿತಿ ಮೀರಬಾರದು
ಬಾಳುವದಕ್ಕೆ ಅಗತ್ಯವಿದ್ದಷ್ಟು ಸಂಗ್ರಹಿಸಬೇಕು
ಅತೀ ಸಂಪತ್ತಿನಿಂದ ಆಸೆಯಿಂದ ದುಡಕಬಾರದು
ಸರಕಾರದ ಸಂಪತ್ತನ್ನು ಕಬಳಿಸಬಾರದು.

ತೊಂದರೆ
ಮಾತು ಮಿತವಾದಷ್ಟಿ ಹಿತಕರ
ವ್ಯರ್ಥ ಕಾಲ ಕಳೆಯುವದು ಅಹಿತಕರ
ನಮ್ಮ ದಿನದ ವ್ಯವಹಾರ ಸರಳವಾಗಿರಬೇಕು

ನುಡಿಮುತ್ತುಗಳು-35


* ಗಾಯ ವಾಸಿಯಾಗಬಹುದು. ಅವಮಾನದ ನೋವು ಎಂದೂ ಮಾಸುವುದಿಲ್ಲ. ಅದ್ದರಿಂದ ಮನಸ್ಸಿಗೆ ಎಂದೂ         ಘಾಸಿ ಮಾಡಕೂಡದು.

* ಅಲ್ಪ ಜ್ಞಾನವು  ಅಪಾಯಕರ. ಅದಕ್ಕಿಂತ ಅಜ್ಞಾನವೇ ಮೇಲು. ಅದ್ದರಿಂದ ಮಾತನಾಡುವ ಅಥವಾ ಭೋದಿಸುವ ಮೊದಲು ಪೂರ್ಣಜ್ಞಾನ ಪಡೆದಿರಬೇಕು. 
*ನಾವು ವಸ್ತುಗಳನ್ನು ಅವು ಇರುವಂತೆಯೇ ನೋಡುವುದಿಲ್ಲ, ಬದಲಾಗಿ ನಾವಿರುವಂತೆ ನೋಡುತ್ತೇವೆ.
* ನಾವು ಬೇರೆಯವರ ಬಗ್ಗೆ ಮಾತಾಡುವಾಗ, ನಾವೆಷ್ಟು ಯೋಗ್ಯರಿದ್ದೇವೆ  ಎಂದು
   ಯೋಚಿಸಬೇಕು. 

* ಕಲ್ಪನೆ ಎಂಬುದು ಕೆರಳಿದ ಸಿಂಹವಿದ್ದಂತೆ. ಅದು ಹುಚ್ಚೆದ್ದು ಓಡಲು ಬಿಟ್ಟರೆ   ನಿಯಂತ್ರಿಸುವುದು ಕಷ್ಟ. ಮನೋ ನಿಗ್ರಹ ಇರಬೇಕು.

* ನೀರಿನಲ್ಲಿ ಕಾಣುವ ಪ್ರಾಕ್ರತಿಕ   ಸೊಬಗಿನ ಪ್ರತಿಬಿಂಬದಂತೆ, ನಮ್ಮ ಮನಸೂ ದ್ವೇಷ ಅಸೂಯೆಗಳಿಂದ ಮುಕ್ತವಾಗಿರಬೇಕು. 

* ಒತ್ತಡವು ನಮ್ಮನ್ನು ಸಾಯಿಸುವ ಮೊದಲೇ, ಅದನ್ನು ನಾವು ಸಾಯಿಸಬೇಕು.
    ಒತ್ತಡ  ನಿಭಾಯಿಸುವುದನ್ನು ಕಲಿತರೆ ಜೀವನ ನಿರ್ವಹಣೆ ಸುಲಭ.

*ಯಾವುದನ್ನು ನಾವು ಗೌರವಿಸುವುದಿಲ್ಲವೂ  ಅದನ್ನು ಮಾಡಹೊರಟರೆ ಸಂತೋಷ ನಮ್ಮ ಪಾಲಿಗಿರುವುದಿಲ್ಲ.

* ನಾವು ಒಳ್ಳೆಯ ಕಾರ್ಯಗಳ್ಳನ್ನು ಮಾಡಿದರೆ, ಅವು ನಮ್ಮ ಜೀವನದಲ್ಲಿಯೇ ಪ್ರತಿಫಲಿಸುತ್ತವೆ. ಅಂತೆಯೇ ದುಷ್ಟ ಕೆಲಸಗಳ್ಳನ್ನು ಮಾಡಿದರೆ, ಅವೇ ನಮ್ಮ ಜೀವನದಲ್ಲಿ ಮತ್ತೆ ಪಾಪವಾಗಿ ನಮ್ಮನ್ನು ಆವರಿಸಿಕೊಳುತ್ತದೆ.

*  ಇತರರಿಗೆ ಏನಾದರೂ ಹಂಚುವುದಿದ್ದರೆ ಸಂತಸವನ್ನು ಹಂಚಬೇಕು.ಅದಕ್ಕಿಂತ ದೊಡ್ಡದಾದ ದಾನ ಧರ್ಮ ಮತ್ತೊಂದು ಇರಲಿಕ್ಕಿಲ್ಲ.

* ಭೂಮಿಯನ್ನು  ಉತ್ತಿ-ಬಿತ್ತಿ ಮಳೆಯಾದರಷ್ಟೇ , ಉತ್ತಮ ಬೆಳೆ ಸಾಧ್ಯ. ರಾತ್ರೋರಾತ್ರಿ  ಯಾವ ಚಮತ್ಕಾರವೂ ಆಗದು. ಹಾಗೇಯೇ ನಾವಂದುಕೊಂಡ ಕೆಲಸ, ಗುರಿ ತಲುಪ ಬೇಕಿದ್ದರೆ ಪರಿಶ್ರಮ ಪಡಬೇಕು.

ನವೆಂಬರ್ 01, 2012

ಕನ್ನಡ ನಾಡಿನ ಉದಯದ ನೆನಪು


ಜೇನಿನ ಹೊಳೆಯೊ ಹಾಲಿನ ಮಳೆಯೊ, ಸುಧೆಯೊ ಕನ್ನಡ ಸವಿ ನುಡಿಯೊ
ಹಸಿರಾಗಲಿ ಕರ್ನಾಟಕ - ಉಸಿರಾಗಲಿ ಕನ್ನಡ,
ಕರುನಾಡ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
ಸಿರಿಗನ್ನಡಂ ಗೆಲ್ಗೆ - ಸಿರಿಗನ್ನಡಂ ಬಾಳ್ಗೆ
ಜೈ ಕರ್ನಾಟಕ ಮಾತೆ - ಜೈ ಭುವನೇಶ್ಕವರಿ ಮಾತೆ
ಜೇನಿನ ಹೊಳೆಯೊ ಹಾಲಿನ ಮಳೆಯೊ, ಸುಧೆಯೊ ಕನ್ನಡ ಸವಿ ನುಡಿಯೊ
ಹಸಿರಾಗಲಿ ಕರ್ನಾಟಕ - ಉಸಿರಾಗಲಿ ಕನ್ನಡ,
ಕರುನಾಡ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
ಸಿರಿಗನ್ನಡಂ ಗೆಲ್ಗೆ - ಸಿರಿಗನ್ನಡಂ ಬಾಳ್ಗೆ
ಜೈ ಕರ್ನಾಟಕ ಮಾತೆ - ಜೈ ಭುವನೇಶ್ಕವರಿ ಮಾತೆ

ಕನ್ನಡ ನಾಡಿನ ಹುಟ್ಟಿನ ದಿನ

ಮಾರ್ಚ್ 17, 2012

ನುಡಿಮುತ್ತುಗಳು - 33

  • "ದೋಷವನ್ನು ಹುಡುಕುವುದು ಸುಲಭ ಆದರೆ ಅದನ್ನು ಸರಿಪಡಿಸುವುದು ಕಠಿಣ"
  • ಜ್ಞಾನವಂತನಾದ ಮಿತ್ರನು ಜೀವನದ ಬಹುದೊಡ್ಡ ವರದಾನ.
  • ಬೇರೆಯವರನ್ನು ಆಡಿಕೊಂಡು ನೋಡಿ ನಗುವ ಮೊದಲು, ನಿನ್ನನ್ನು ನೀನು ಆಡಿಕೊಂಡು ನಗು.
  • ಸತ್ಯ ಮತ್ತು ನ್ಯಾಯವನ್ನು ಸಮರ್ಥನೆ ಮಾಡಿಕೊಳ್ಳುವುದು ಮನುಷ್ಯನ ಸಭ್ಯತೆ ಹಾಗೂ ಸಜ್ಜನಿಕೆಯ ಒಂದು ಅಂಗ.
  • ಸಮುದ್ರದಲ್ಲಿ ಸುರಿದ ಮಳೆ, ಹಸಿವಿಲ್ಲದವನಿಗೆ ನೀಡಿದ ಭೋಜನ, ಧನವಂತನಿಗೆ ಕೊಟ್ಟ ದಾನ, ದರಿದ್ರನಿಗೆ ಬಂದ ಯೌವನ ಇವೆಲ್ಲ ವ್ಯರ್ಥವೇ ಸರಿ.
  • ಮನಸ್ಸಿನಲ್ಲಿ ಭಗವಂತನ ಆಲೋಚನೆ, ನುಡಿಯಲ್ಲಿ ಆತನ ಗುಣಗಾನ, ಕ್ರಿಯೆಯಲ್ಲಿ ಪವಿತ್ರ ಕಾಯಕ ಇದೇ ದೈವ ಸಾಕ್ಷಾತ್ಕಾರದ ಮೂಲ.

ಫೆಬ್ರವರೀ 15, 2012

ನುಡಿಮುತ್ತುಗಳು - 32

ಹುಲ್ಲಾಗು ಬೆಟ್ಟದಡಿ ಮನಕೆ ಮಲ್ಲಿಗೆಯಾಗು
 ಕಲ್ಲಾಗು ಕಷ್ಟಗಳ ಮಳೆಯ ವಿಧಿ ಸುರಿಯೆ
 ಬೆಲ್ಲ ಸಕ್ಕರೆಯಾಗು ದೀನ ದುರ್ಬಲರಿಂಗೆ
 ಎಲ್ಲರೊಳಗೊಂದಾಗು ಮಂಕುತಿಮ್ಮ

ಅಕ್ಕಿಯೊಳಗನ್ನವನು ಮೊದಲಾರು ಕಂಡವರು
 ಅಕ್ಕರದ ಬರಹಕ್ಕೆ ಮೊದಲಿಗನದಾರು 
ಲೆಕ್ಕವಿರಿಸಿಲ್ಲ ಜಗ ತನ್ನಾದಿ ಬಂಧುಗಳ 
ದಕ್ಕುವುದೆ ಜಸ ನಿನಗೆ ಮಂಕುತಿಮ್ಮ

ನಂಬದಿರ್ದನು ತಂದೆ ನಂಬಿದನು ಪ್ರಹ್ಲಾದ।
ನಂಬಿಯುಂ ನಂಬದಿಹ ಇಬ್ಬಂದಿ ನೀನು।
ಕಂಬದಿನೊ ಬಿಂಬದಿನೊ ಮೋಕ್ಷವರಿಂಗಾಯ್ತು 
ಸಿಂಬಳದ ನೊಣ ನೀನು ಮಂಕುತಿಮ್ಮ॥

ದಿವಸದಿಂ ದಿವಸಕ್ಕೆ ನಿಮಿಷದಿಂ ನಿಮಿಷಕ್ಕೆ।
ಭವಿಷಿಯವ ಚಿಂತಿಸದೆ ಬದುಕ ನೂಕುತಿರು॥
ವಿವರಗಳ ಜೋಡಿಸುವ ಯಜಮಾನ ಬೇರಿಹನು।
ಸವೆಸು ನೀಂ ಜನುಮವನು-ಮಂಕುತಿಮ್ಮ

ಸೈನಿಕ ನೀನು ಸೇನಾಧಿಪತಿಯೆಲ್ಲಿಹನೊ।
ಆಣತಿಯ ಕಳುಹುತಿಹನವನು ನೀನರಿತು॥ 
ಜಾಣಿನಧಟಿಂ;ಸೋಲು ಗೆಲುವವನೆಣಿಕೆ।
ಕಾಣಿಸನಾಳ್ಕೆಯದು ಮಂಕುತಿಮ್ಮ


ಫೆಬ್ರವರೀ 08, 2012

ನುಡಿಮುತ್ತುಗಳು - 31



ದೇವರೆಂಬುದೇನು ಕಗ್ಗತ್ತಲೆಯ ಗವಿಯೆ?

ನಾವರಿಯಲಾರದೆಲ್ಲದರರೊಟ್ಟು ಹೆಸರೆ ?
ಕಾವನೊರ್ವನಿರಲ್ಕೆ ಜಗದ ಕಥೆಯೇಕಿಂತು?
ಸಾವು ಹುಟ್ಟುಗಳೇನು?‍ ಮಂಕುತಿಮ್ಮ||



ಹುಲ್ಲಾಗು ಬೆಟ್ಟದಡಿ ಮನಕೆ ಮಲ್ಲಿಗೆಯಾಗು 
ಕಲ್ಲಾಗು ಕಷ್ಟಗಳ ಮಳೆಯ ವಿಧಿ ಸುರಿಯೆ
 ಬೆಲ್ಲ ಸಕ್ಕರೆಯಾಗು ದೀನ ದುರ್ಬಲರಿಂಗೆ 
ಎಲ್ಲರೊಳಗೊಂದಾಗು ಮಂಕುತಿಮ್ಮ||

ಹೊಸತನವೆ ಬಾಳು; ಹಳಸಿಕೆಯಲ್ಲ ಸಾವು ಬಿಡು|
ರಸವು ನವನವತೆಯಿಂದನುದಿನವು ಹೊಮ್ಮಿ||
ಹಸನೊಂದು ನುಡಿಯಲ್ಲಿ ನಡೆಯಲ್ಲಿ ನೋಟದಲಿ|
ಪಸರುತಿರೆ ಬಾಳ್ ಚೆಲುವು-ಮಂಕುತಿಮ್ಮ||

ಬದುಕು ಜಟಕಾಬಂಡಿ ವಿಧಿಯದರ ಸಾಹೇಬ
 ಮದುವೆಗೋ ಮಸಣಕೋ ಹೋಗೆಂದ 
ಕಡೆಗೋಡು ಪದ ಕುಸಿಯೆ ನೆಲವಿಹುದು ಮಂಕುತಿಮ್ಮ||

ಕಡಲ್ಗಳೊಂದಾದೊಡಂ, ಪೊಡವಿ ಹಬೆಯಾದೊಡಂ|
ಬಿಡದಿರೊಳ ನೆಮ್ಮದಿಯ, ಬಿಡು ಗಾಬರಿಕೆಯ||
ಕಡಲ ನೆರೆ ತಗ್ಗುವುದು, ಪೊಡವಿ ಧೂಳಿಳಿಯುವುದು|
ಗಡುವಿರುವುದೆಲ್ಲಕಂ- ಮಂಕುತಿಮ್ಮ ||

ಅನುಭವದ ಪಾಲೊಳು ವಿಚಾರ ಮಂಥನವಾಗೆ | 
ಜನಯಿಕುಂ ಜ್ಞಾನನವನೀತವೆ ಸುಖದಂ ||
 ಗಿಣಿಯೋದು ಪುಸ್ತಕಜ್ಞಾನ; ನಿನ್ನನುಭವವೆ |
 ನಿನಗೆ ಧರುಮದ ದೀಪ -- ಮಂಕುತಿಮ್ಮ ||


ಇಪ್ಪತ್ತು ಸಾವಿರದ ಸಂಭ್ರಮದಲ್ಲಿ

ನನ್ನ ಪ್ರಯತ್ನಕ್ಕೆ ಇಷ್ಟೊಂದು ಪ್ರೋತ್ಸಾಹ ದೊರಕ್ಕುತ್ತಿರುವುದು ತುಂಬಾ ಸಂತೋಷದ ಸಂಗತಿಯಾಗಿದೆ. ನನ್ನ ನುಡಿಮುತ್ತುಗಳು ಬ್ಲಾಗ್ ಕಳೆದ ನವೆಂಬರ್ ತಿಂಗಳಲ್ಲಿ ಹದಿನಾರು ಸಾವಿರ ಬಾರಿ ವೀಕ್ಷಣೆಯಾಗಿತ್ತು. ಈಗ ಕೇವಲ ಎರಡುವರೆ ತಿಂಗಳಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ವೀಕ್ಷಣೆಯಾಗಿದೆ. ಇದರೊಂದಿಗೆ ಒಟ್ಟು 20,000 ಬಾರಿ ವೀಕ್ಷಣೆಯಾಗಿದೆ. ಪ್ರತಿಯೊಬ್ಬರ ಜೀವನಕ್ಕೆ ಅವಶ್ಯಕವಾಗಿರುವ ಆದರ್ಶ ವ್ಯಕ್ತಿಗಳ ಮಾತುಗಳು ತುಂಬಾ ಅವಶ್ಯಕ. ಇವುಗಳ ವ್ಯಕ್ತಿಗಳ ಗುರಿಯೆಡೆಗೆ ತಲುಪಿಸುವಲ್ಲಿ ಸಹಕಾರಿಯಾಗಿವೆ. ಕನ್ನಡದಲ್ಲಿ ನುಡಿಮುತ್ತುಗಳ ಸಂಗ್ರಹದ ಕೆಲಸಕ್ಕೆ ಮನ್ನಣೆ ದೊರೆತು, ಈ ತರಹದ ಕನ್ನಡದ ಬ್ಲಾಗ್ ಗಳನ್ನು ಪ್ರೋತ್ಸಾಹಿಸಿರುವುದಕ್ಕೆ ತುಂಬಾ ಋಣಿಯಾಗಿರುತ್ತೇನೆ. ಮುಂದಿನ ದಿನಗಳಲ್ಲಿ ಇಂತಹ ಕೆಲಸಗಳನ್ನು ಮುಂದುವರಿಸುತ್ತೇನೆ. ಎಲ್ಲಾ ಕನ್ನಡಾಭಿಮಾನಿಗಳಿಗೆ ವಂದನೆಗಳು.

ನುಡಿಮುತ್ತುಗಳು ಬ್ಲಾಗ್ 2009 ಜೂನ್ ತಿಂಗಳಲ್ಲಿ ಪ್ರಾರಂಭವಾಯಿತು. ನಂತರ ತನ್ನ ವಿಸ್ತಾರತೆಯನ್ನು ಬೆಳಸಿಕೊಂಡು ಓದುಗರ ಸಂಖ್ಯೆಯನ್ನು ದಿನದಿಂದ ದಿನಕ್ಕೆ ದ್ವಿಗುಣಗೊಳ್ಳುತ್ತಾ ಸಾಗುತ್ತಿದೆ. ಈ ದಿನದ ಪ್ರಕಾರ ನನ್ನ ಬ್ಲಾಗಿನ ಅಂಕಿಅಂಶ ಈ ಕೆಳಕಂಡತ್ತಿದೆ.

India
19,253
United States
130
United Arab Emirates
109
Saudi Arabia
69
Kuwait
62
Norway
53
Germany
30
United Kingdom
24
Malaysia
20
Singapore
13 
Total : 20,013
as per date: 08/02/2012



ಕನ್ನಡ ಬಳಸಿ - ಕನ್ನಡ ಉಳಿಸಿ




ಇಂತಿ ನಿಮ್ಮವ,
ಮಂಜುನಾಥ್.ಎಂ.ಕೆ

ನವೆಂಬರ್ 11, 2011

ಹದಿನಾರು ಸಾವಿರದ ಸಂಭ್ರಮ

ಈ ನನ್ನ ನುಡಿಮುತ್ತುಗಳು ಬ್ಲಾಗ್ ಹದಿನಾರು ಸಾವಿರಕ್ಕೂ ಹೆಚ್ಚು ಬಾರಿ ವೀಕ್ಷಣೆಯಾಗಿದೆ. ಇದು ನನ್ನ ನುಡಿಮುತ್ತುಗಳ ಸಂಗ್ರಹ ಪ್ರಯತ್ನಕ್ಕೆ ಸಿಕ್ಕ ಫಲ. ನಾನು ಈ ಬ್ಲಾಗ್ ಪ್ರಾರಂಭಿಸಿ ಎರಡು ವರ್ಷವಾಯಿತು. ಈ ಅವಧಿಯಲ್ಲಿ ಇಷ್ಟು ಬಾರಿ ವೀಕ್ಷಣೆಯಾಗಿರುವುದಕ್ಕೆ ತುಂಬಾ ಸಂತೋಷವಾಗುತ್ತಿದೆ ಮತ್ತು ಇನ್ನಷ್ಟು ನುಡಿಮುತ್ತುಗಳ ಸಂಗ್ರಹಕ್ಕೆ ಪ್ರಯತ್ನ ಮಾಡುತ್ತೇನೆ. ಆದರೆ ನನ್ನ ಈ ಬ್ಲಾಗಿನಿಂದ ನುಡಿಮುತ್ತುಗಳನ್ನು ನೇರವಾಗಿ ನಕಲಿಸಿ ಬೇರೆ ಬ್ಲಾಗಿನಲ್ಲಿ ಬಳಸಿಕೊಳ್ಳುತ್ತಿದ್ದಾರೆ. ಆದರೆ ಈ ಬ್ಲಾಗಿನಲ್ಲಿ ಇಲ್ಲದ ನುಡಿಮುತ್ತುಗಳನ್ನು ಸಂಗ್ರಹ ಮಾಡಿದರೆ ಅಂತರ್ಜಾಲ ಜಗತ್ತಿಗೆ ಕನ್ನಡಿಗರ ಕೊಡುಗೆಯಾಗುತ್ತದೆ ಎಂಬುದು ನನ್ನ ಆಶಯ.


ನನ್ನ ಎಲ್ಲ ಕನ್ನಡ ಬಂಧು ಮಿತ್ರರಿಗೆ ಕನ್ನಡ ರಾಜ್ಯೋತ್ಸವದ ಶುಭಾಷಯಗಳು. 

ಕನ್ನಡ ಬಳಸಿ - ಕನ್ನಡ ಉಳಿಸಿ


ಇಂತಿ ನಿಮ್ಮವ,
ಮಂಜು.ಎಂ.ಕೆ

ನವೆಂಬರ್ 09, 2011

ನುಡಿಮುತ್ತುಗಳು - 30

ಹುಟ್ಟು - ಸಾವು ಈ ಎರಡು ಪದಗಳ ಅಕ್ಷರಗಳು ಎರಡಾದರೂ ಈ ಎರಡರ ನಡುವಿನ ಬದುಕು ತುಂಬಾ ನಿಗೂಢ.


ಪ್ರೀತಿ ಮತ್ತು ಸ್ನೇಹ ಒಂದು ನಾಣ್ಯದ ಎರಡು ಮುಖಗಳು. ಸ್ನೇಹದ ಬಳಿಯಿಂದ ಪ್ರೀತಿ ಮರವಾಗಿ ಬೆಳೆಯುತ್ತದೆ.


ಬದುಕಿನ ನಿಗೂಢಗಳನ್ನು ಅರಿಯುವ ಮೊದಲು ಮಾನವ ನಿನ್ನನ್ನು ನೀನು ಮೊದಲು ತಿಳಿ.


ಬದುಕಲು ಸಾವಿರ ಭಾಷೆಗಳಿರಬಹುದು ಆದರೆ ಪ್ರೀತಿಸಲು ಕನ್ನಡವೊಂದೇ ಸಾಕು.


- ಮಾ.ಕೃ.ಮಂಜು