"ಪ್ರತಿಫಲದ ಅಪೇಕ್ಷೆಯಿಲ್ಲದೆ ಮಾಡಿದ ಸಹಾಯ ಎಂದಿಗೂ ದೊಡ್ಡದು."
"ಜೀವನದಲ್ಲಿ ಎಂದೂ ಯಾರಿಂದಲೂ ಸಹಾಯದ ಅಪೇಕ್ಷೆಯನ್ನ ಇಡಬಾರದು. ಯಾಕೆಂದರೆ ನಾವು ಕಷ್ಟದಲ್ಲಿ ಇದ್ದಾಗ ಯಾರಾದರೂ ಸಹಾಯ ಮಾಡದಿದ್ದರೆ ಅದಕ್ಕಿಂತ ದೊಡ್ಡ ಯಾತನೆ ಬೇರೊಂದಿಲ್ಲ."
"ದೇವರಲ್ಲಿ ಎಂದಿಗೂ ಕೇವಲ ಸ್ವಂತದ ಏಳಿಗೆಯಾಗಲಿ ಅಂತ ಬೇಡಿಕೊಳ್ಳದೆ ಹತ್ತು ಜನರ ಏಳಿಗೆಯಾಗಲಿ ಅಂತ ಬೇಡಿಕೊಳ್ಳಿ. ದೇವರ ಕೊಡುವ ವರಕ್ಕಿಂತ ಆ ಹತ್ತು ಜನರನ್ನ ಉದ್ಧಾರ ಮಾಡಿದ ಪುಣ್ಯ ಎಷ್ಟೋ ದೊಡ್ಡದು"
"ಮನುಷ್ಯನಿಗೆ ಯಾವಾಗ ಒಂದು ವಸ್ತು ಸುಲಭವಾಗಿ ಸಿಗುವ ಹಾಗೆ ಇರುತ್ತೋ ಆಗ ಅದರ ಬೆಲೆ ಗೊತ್ತಿರುವುದಿಲ್ಲ, ಆದರೆ ಯಾವಾಗ ಆ ವಸ್ತುವಿನ ಬೆಲೆ ತಿಳಿಯುತ್ತದೋ ಆಗ ಅದು ಸುಲಭವಾಗಿ ಸಿಗುವುದಿಲ್ಲ."




















